Advertisement

ವಿದ್ಯಾರ್ಥಿಗಳು ಘನತೆಯ ಜೀವನಕ್ಕೆ ಸಿದ್ಧರಾಗಿ

11:53 AM May 30, 2018 | |

ಬೆಂಗಳೂರು: ಹಿಂಜರಿಕೆ ಇಲ್ಲದ ಘನತೆಯ ಜೀವನ ನಡೆಸಲು ಈಗಿಂದಲೇ ಸಿದ್ಧತೆ ಮಾಡಿಕೊಳ್ಳಿ ಎಂದು ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಐ.ಎಸ್‌.ಶಿವಕುಮಾರ್‌ ಸಲಹೆ ನೀಡಿದರು. 

Advertisement

ಯುನಿರ್ವಸಿಟಿ ವಿಶ್ವೇಶ್ವರಯ್ಯ ಕಾಲೇಜ್‌ ಆಫ್ ಎಂಜಿನಿಯರಿಂಗ್‌(ಯುವಿಸಿಇ) ವತಿಯಿಂದ ಮಂಗಳವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು  ಭವಿಷ್ಯದಲ್ಲಿ ಹಿಂಜರಿಕೆ ಇಲ್ಲದೇ ಘನೆಯುತವಾಗಿ ಸಮಾಜದಲ್ಲಿ ಬದುಕವಂತ ಕಲೆ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿ ದೇಶದ ಕೀರ್ತಿಯನ್ನು ಬೆಳಗುವ ಜತೆಗೆ ಶಿಕ್ಷಣ ಕ್ಷೇತ್ರಕ್ಕೂ ಕೊಡುಗೆ ನೀಡಬೇಕು ಎಂದರು.
ಸಿಟಿಎಸ್‌ನ ಮಾನವ ಸಂಪನ್ಮೂಲ ವಿಭಾಗದ ಹಿರಿಯ ನಿರ್ದೇಶಕ ಶ್ರೀಕಾಂತ್‌ ಶ್ರೀನಿವಾಸನ್‌ ಮಾತನಾಡಿ, ಆಧುನಿಕ ಜಗತ್ತಿಗೆ ತಕ್ಕಂತೆ ವಿದ್ಯಾರ್ಥಿಗಳ ಜ್ಞಾನದ ಮಟ್ಟವನ್ನು ಮೇಲ್ದರ್ಜೆಗೆ ಏರಿಸಿಕೊಳ್ಳುತ್ತಿರಬೇಕು.

ಸ್ಪರ್ಧಾತ್ಮಕ ಜಗತ್ತಿನ ಏಳು ಬೀಳುಗಳನ್ನು ಅರ್ಥಮಾಡಿಕೊಂಡು ಮುಂದೆ ಸಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಯುವಿಸಿಇ ನಿವೃತ್ತ ಪ್ರಾಂಶುಪಾಲ ಡಾ.ಕೆ. ಆರ್‌.ವೇಣುಗೋಪಾಲ್‌, ಪ್ರಾಂಶುಪಾಲ ಡಾ.ಪಿ.ವಿಜಯಕುಮಾರ್‌, ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ ಹಾಗೂ ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next