Advertisement

ಹಿಜಾಬ್ ವಿವಾದ: ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ

10:58 PM Mar 15, 2022 | Team Udayavani |

ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪು ಪ್ರಶ್ನಿಸಿ ಉಡುಪಿ ವಿದ್ಯಾರ್ಥಿನಿ ನಿಬಾ ನಾಜ್‌ ಸುಪ್ರೀಂಕೋರ್ಟ್‌ ಬಾಗಿಲು ತಟ್ಟಿದ್ದಾರೆ.

Advertisement

ಹೈಕೋರ್ಟ್‌ ತೀರ್ಪು ಧಾರ್ಮಿಕ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯದಲ್ಲಿ ಇಬ್ಬಗೆಯ ನಿಲುವು ಹೊಂದಿದಂತೆ ಇದೆ. ಧರ್ಮವನ್ನು ಪಾಲಿಸುವವರು ಆತ್ಮಸಾಕ್ಷಿಯ ಹಕ್ಕನ್ನು ಹೊಂದುವಂತಿಲ್ಲ ಎಂದು ಪ್ರತಿಪಾದಿಸಿದಂತಾಗಿದೆ ಎಂದು ಮೇಲ್ಮನವಿಯಲ್ಲಿ ಅರಿಕೆ ಮಾಡಿಕೊಂಡಿದ್ದಾರೆ.

ಸಮವಸ್ತ್ರ ಧರಿಸಬೇಕು ಎಂದು ಫೆ.5ರಂದು ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶದಿಂದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಅದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದ್ದರೂ, ಪರಿಣಾಮವಾಗಿಲ್ಲ ಎಂದು ವಿದ್ಯಾರ್ಥಿನಿ ಅರಿಕೆ ಮಾಡಿಕೊಂಡಿದ್ದಾರೆ.

ಇದೇ ವೇಳೆ, ವಿದ್ಯಾರ್ಥಿನಿಯ ಅರ್ಜಿ ವಿಚಾರಣೆ ನಡೆಯುವ ಮುನ್ನ ತಮ್ಮ ವಾದ ಸಲ್ಲಿಕೆಗೆ ಅವಕಾಶ ನೀಡಬೇಕು ಎಂದು ಕೇವಿಯಟ್‌ವೊಂದನ್ನು ಸಲ್ಲಿಕೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next