Advertisement

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

02:28 PM Jun 19, 2019 | Team Udayavani |

ಇಳಕಲ್ಲ: ರಾಜ್ಯದ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಇಳಕಲ್ಲ ಘಟಕ ಮಂಗಳವಾರ ತಾಲೂಕಾ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ವೇದವ್ಯಾಸ ಮುತಾಲಿಕ್‌ ಅವರಿಗೆ ಮನವಿ ಸಲ್ಲಿಸಿದರು.

Advertisement

ಪರಿಷತ್‌ ಜಿಲ್ಲಾ ಸಹ ಸಂಚಾಲಕ ವಿಜಯ ಗೌಡರ ಮಾತನಾಡಿ, ಶಿಕ್ಷಣ ಸರ್ವರಿಗೂ ಸಿಗಬೇಕಾದ ಅಮೂಲ್ಯ ವಸ್ತು. ಜಾತಿ, ಮತ, ಬಡವ, ಶ್ರೀಮಂತ ತಾರತಮ್ಯ ಎನಿಸದೆ ಶಿಕ್ಷಣ ಎಲ್ಲರಿಗೂ ದೊರಕುವಂತೆ ಮಾಡುವುದು ಸರಕಾರದ ಕರ್ತವ್ಯ. ಎಸ್‌ಸಿ, ಎಸ್‌ಟಿ ಸೇರಿದಂತೆ ಉಳಿದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಇಂದಿನವರೆಗೂ ಆ ಯೋಜನೆ ಜಾರಿಗೆ ಬಂದಿಲ್ಲ. ಇದರಿಂದ ವಿದ್ಯಾರ್ಥಿಗಳ ಮೇಲೆ ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆ ಕಾರಣ. ರಾಜ್ಯದ ಜನತೆ ಬರಗಾಲದ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ರೈತಾಪಿ ವರ್ಗದ ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿದೆ. ಇಂತಹ ಸಂದರ್ಭದಲ್ಲಿ ಸರಕಾರ ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ ಸೌಲಭ್ಯ ಒದಗಿಸದಿದ್ದರೇ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದು ಹೇಳಿದರು.

ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಿಂದ ಪ್ರತಿಭಟನಾ ಮೆರವಣಿಗೆ ನಡೆದು ಜಗಜೀವನರಾಮನ್‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ನಗರ ಘಟಕದ ಕಾರ್ಯದರ್ಶಿ ವಿನಯ ಮಲಾರಖಾನ, ಸೋಮು ಪಾಟೀಲ, ಸಿದ್ದು ಹಿರೇಮಠ, ವಿಜಯ ನಂದಿಹಾಳ, ಶಿಲ್ಪಾ ಭಾವಿಕಟ್ಟಿ, ಯಶೋಧಾ ಗೌಡರ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next