Advertisement

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಿಸಲು ಆಗ್ರಹ

09:16 AM Jun 04, 2019 | Team Udayavani |

ಬೀದರ: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರ ತಕ್ಷಣ ಉಚಿತ ಬಸ್‌ ಪಾಸ್‌ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Advertisement

ಸರ್ಕಾರ ಈ ಹಿಂದೆ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆ ಮಾಡುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ನೆರವು ನೀಡಿತ್ತು. ಅದೇ ರೀತಿಯಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಬಸ್‌ ಪಾಸ್‌ ನೀಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರ ನೀಡಬೇಕು. ಬಸ್‌ ಪಾಸ್‌ ನೀಡುವ ಕುರಿತು ಸರ್ಕಾರ ಕಾಳಜಿ ವಹಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಈಗಾಗಲೇ ಮೇ 22ರಿಂದ ಪಿಯು ದ್ವಿತೀಯ ವರ್ಷದ ತರಗತಿಗಳು ಪ್ರಾರಂಭವಾಗಿವೆ. ಆದರೆ, ಪಾಸ್‌ ಇಲ್ಲದ ಕಾರಣ ವಿದ್ಯಾರ್ಥಿಗಳು ತರಗತಿಯಿಂದ ದೂರ ಉಳಿಯುವ ಸ್ಥಿತಿ ಎದುರಾಗಿದೆ. ಅನೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶದ ಕಾಲೇಜಿಗೆ ಬರಲು ಹಣ ಖರ್ಚು ಮಾಡುವ ಸ್ಥಿತಿ ಇದ್ದು, ಕೂಡಲೆ ಕಾಲೇಜು ವಿದ್ಯಾರ್ಥಿಗಳಿಗೆ ಪಾಸ್‌ ನೀಡುವ ಕೆಲಸ ಆಗಬೇಕು ಎಂದು ಒತ್ತಾಯಿಸಿದರು. ಎಬಿವಿಪಿ ರಾಜ್ಯಸಹ ಕಾರ್ಯದರ್ಶಿ ರೇವಣಸಿದ್ದ ಜಾಡರ, ಜಿಲ್ಲಾಸಂಘಟನಾ ಕಾರ್ಯದರ್ಶಿ ಧನಜಯಾ ಚಿತ್ರದುರ್ಗಾ, ನಗರ ಉಪಧ್ಯಕ್ಷ ಚನ್ನಬಸವ ಬೀರಾದರ, ಅಶೋಕ ಶಂಬಳ್ಳೆ, ಅರವಿಂದ ಸುಂದಳಕರ, ಸಚಿನ ಗುನ್ನಾಳೆ, ಉಮೇಶ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next