Advertisement
ಬಂಧಿತರನ್ನು ಉಡುಪಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ನಿಖಿಲ್ ಮತ್ತು ಶ್ರೇಯಾ ಎಂದು ಗುರುತಿಸಲಾಗಿದೆ. ಬಂಧಿತ ವಿದ್ಯಾರ್ಥಿಗಳಿಂದ ನಾಯಿ ಮರಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಲಯಾಳಂ ಮನೋರಮಾ ವರದಿ ಮಾಡಿದೆ.
Related Articles
Advertisement
ಅಂಗಡಿ ಮಾಲೀಕರು ಇತ್ತೀಚೆಗೆ ಎಡಪ್ಪಲ್ಲಿ ಎಂಬಲ್ಲಿಂದ ಖರೀದಿಸಿದ್ದ ಮೂರು ನಾಯಿ ಮರಿಗಳಲ್ಲಿ ಕದ್ದ ನಾಯಿಮರಿಯೂ ಒಂದಾಗಿದೆ. ಎರಡು ನಾಯಿ ಮರಿಗಳನ್ನು ಅಲಪ್ಪುಳದ ವ್ಯಕ್ತಿಯೊಬ್ಬರು ಖರೀದಿಸುವುದಾಗಿ ತಿಳಿಸಿದ್ದರು. ಆ ವ್ಯಕ್ತಿ ನಾಯಿ ಮರಿ ಖರೀದಿಸಲು ಬಂದಾಗ ಕಳವು ಘಟನೆ ಬೆಳಕಿಗೆ ಬಂದಿದ್ದು, ಮಾಲೀಕರು ಸಿಸಿಟಿವಿ ಪರಿಶೀಲಿಸಿದ್ದರು.
ಸಿಸಿಟಿವಿಯಲ್ಲಿ ನಿಖಿಲ್ ಮತ್ತು ಶ್ರೇಯಾ ನಾಯಿ ಮರಿ ಕಳವು ಮಾಡಿರುವುದು ಪತ್ತೆಯಾಗಿತ್ತು. ಕೂಡಲೇ ಅಂಗಡಿ ಮಾಲೀಕ ಪೊಲೀಸರಿಗೆ ದೂರು ನೀಡಿದ್ದು, ತನಿಖೆಯ ನಂತರ ಕೇರಳ ಪೊಲೀಸರು ಇಬ್ಬರನ್ನು ಉಡುಪಿಯಲ್ಲಿ ಬಂಧಿಸಿರುವುದಾಗಿ ವರದಿ ತಿಳಿಸಿದೆ.