Advertisement

ಕಾರಿಡಾರ್‌ನಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

04:16 PM Mar 02, 2018 | Team Udayavani |

ಹಟ್ಟಿಚಿನ್ನದಗಣಿ: ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೇಂದ್ರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ಗುರುವಾರ ಆರಂಭಗೊಂಡವು. ಈ ಪರೀಕ್ಷಾ ಕೇಂದ್ರದಲ್ಲಿ ಸ್ಥಳದ ಅಭಾವದಿಂದ ಕಾಲೇಜಿನ ಕಾರಿಡಾರ್‌ನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

Advertisement

ಹಟ್ಟಿಯ ಸ.ಪ.ಪೂ ಕಾಲೇಜು, ವಿನಾಯಕ, ಶರಣ ಬಸವೇಶ್ವರ ಹಾಗೂ ಗುರುಗುಂಟಾದ ಸರ್ಕಾರಿ ಕಾಲೇಜಿನ ಅರ್ಥಶಾಸ್ತ್ರಕ್ಕೆ 482 ಹಾಗೂ ಭೌತಶಾಸ್ತ್ರ ವಿಷಯಕ್ಕೆ 31ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದರು. ಒಟ್ಟು 25 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಇಲಾಖೆ ನಿಮಯಮಾನುಸಾರ ಪರೀಕ್ಷಾ ಕೇಂದ್ರದ ಐದು ಕಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಕೊಠಡಿ ಕೊರತೆಯಿಂದ ಕಾಲೇಜಿನ ಮುಖ್ಯದ್ವಾರದ ಮುಂದೆ ಬಯಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಪರೀಕ್ಷಾ ಕೇಂದ್ರದಲ್ಲಿ ತಿರುಗಾಡುವವರನ್ನು ನೋಡುತ್ತಾ ಕುಳಿತ ಕೆಲ ವಿದ್ಯಾರ್ಥಿಗಳ ಏಕಾಗ್ರತೆಗೆ ಭಂಗ ಉಂಟಾಯಿತು. ಇನ್ನು ಕೆಲವೇ ಮೀಟರ್‌ಗಳ ಅಂತರದಲ್ಲಿ ಜೆಡಿಎಸ್‌ ಪಕ್ಷದ ಮುಖಂಡ ಸಿದ್ದು ಬಂಡಿಯವರು ಹಮ್ಮಿಕೊಂಡಿದ್ದ ಕ್ರಿಕೆಟ್‌ ಪಂದ್ಯಾವಳಿ ಕಾಮೆಂಟ್ರಿಯ ಧ್ವನಿ, ಸಿಳ್ಳೆ, ಕೇಕೆ ವಿದ್ಯಾರ್ಥಿಗಳಿಗೆ ತೊಂದರೆ ಉಂಟು ಮಾಡಿತು.

Advertisement

Udayavani is now on Telegram. Click here to join our channel and stay updated with the latest news.

Next