Advertisement

ಭೂ ಪರಿಹಾರ ನೀಡಲು ನಿರ್ಲಕ್ಷ್ಯ: ಉಪವಿಭಾಗಾಧಿಕಾರಿ ವಾಹನ ಜಪ್ತಿ

03:48 PM Jun 28, 2022 | Team Udayavani |

ಪಾಂಡವಪುರ: ಪಟ್ಟಣದ ಒಳಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಜಮೀನು ನೀಡಿದ ರೈತರಿಗೆ ಪರಿಹಾರ ಒದಗಿಸಲು ವಿಫಲರಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಉಪವಿಭಾಗಾಧಿಕಾರಿಗಳ ವಾಹನ ಜಪ್ತಿ ಮಾಡಲಾಯಿತು.

Advertisement

ಏನಿದು ಪ್ರಕರಣ?: ಪಾಂಡವಪುರ ಪಟ್ಟಣದಲ್ಲಿ 2006 ರಲ್ಲಿ ನಿರ್ಮಾಣಗೊಂಡ ಒಳಚರಂಡಿ ವ್ಯವಸ್ಥೆಯ ಮಲಿನ ನೀರು ಸಂಸ್ಕರಣೆ ಮಾಡಲು ಪಟ್ಟಣದ ಹೊರವಲಯದಲ್ಲಿ ರೈತರ 5.20 ಎಕರೆ ಭೂಮಿಯನ್ನು ಒಳಚರಂಡಿ ಮತ್ತು ನೀರು ಸರಬರಾಜು ಮಂಡಳಿ 2008 ಮತ್ತು 2009ರಲ್ಲಿ ಸ್ವಾ ಧೀನಪಡಿಸಿಕೊಂಡಿತ್ತು. ಈ ವೇಳೆ ರೈತರಿಗೆ ಅಲ್ಪ ಮೊತ್ತದ ಪರಿಹಾರ ನೀಡಲು ಮುಂದಾಯಿತು. ಪರಿಹಾರದ ಮೊತ್ತಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರೈತರು, ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಅವಕಾಶ ನೀಡದೆ ರೈತ ನಾಯಕ ಕೆ.ಎಸ್‌.ಪುಟ್ಟಣ್ಣಯ್ಯ ನೇತೃತ್ವದಲ್ಲಿ ಹೋರಾಟ ನಡೆಸಿ, ಹೆಚ್ಚಿನ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು.

ಆದೇಶಿಸಿ 3 ವರ್ಷ ಕಳೆದರೂ ಪರಿಹಾರ ನೀಡಿರಲಿಲ್ಲ : ರೈತರ ಮನವಿಯನ್ನು ಪುರಸ್ಕರಿಸಿದ ಪಾಂಡವಪುರ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ, ರೈತರ ಜಮೀನಿಗೆ ಪರಿಹಾರ ನೀಡಲು ಆದೇಶಿಸಿತ್ತು. ನ್ಯಾಯಾಲಯ ಆದೇಶ ನೀಡಿ ಮೂರು ವರ್ಷ ಕಳೆದರೂ ನ್ಯಾಯಾಲಯದ ಆದೇಶ ಪಾಲಿಸಿದ ಉಪವಿಭಾಗಾಧಿ ಕಾರಿಗಳ ನಡೆ ಪ್ರಶ್ನಿಸಿ ರೈತ ಸತ್ಯನಾರಾಯಣ ಎಂಬವರು ಅ ಧಿಕಾರಿಗಳ ವಿರುದ್ಧ ನ್ಯಾಯಾಲಯ ಮೆಟ್ಟಿಲೇರಿದ್ದರು. ಹೀಗಾಗಿ ಕೋರ್ಟ್‌ ಉಪವಿಭಾಗಾಧಿಕಾರಿಗಳ ವಾಹನ ಜಪ್ತಿಗೆ ಆದೇಶ ನೀಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next