Advertisement

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

08:43 PM Jan 18, 2022 | Team Udayavani |

ಬೆಂಗಳೂರು: ಸುಭಾಷ್‌ ಚಂದ್ರ ಬೋಸ್‌ ಅವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಮಂಗಳವಾರ ಬೆಂಗಳೂರಿನಲ್ಲಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಜಯಂತಿ (ಜನವರಿ 23) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್‌ ಮೂಲಕ ನಡೆಸಿದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

ಇದು ಸುಭಾಷ್‌ ಚಂದ್ರ ಬೋಸ್‌ ಅವರ 125ನೇ ಜನ್ಮ ದಿನ. ಹೀಗಾಗಿ ರಾಜ್ಯದ ಎಲ್ಲ ಶಾಲೆ ಮತ್ತು ಕಾಲೇಜುಗಳಲ್ಲಿ ವರ್ಷವಿಡೀ ಸುಭಾಷ್‌ ಚಂದ್ರ ಬೋಸ್‌ ಅವರ ಕುರಿತಾದ ಕಾರ್ಯಕ್ರಮಗಳನ್ನು ಆಚರಣೆ ಮಾಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ:ಶುಕ್ರವಾರ ಕರ್ಫ್ಯೂ ಭವಿಷ್ಯ, ಲಸಿಕಾಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೆ ಹೊಣೆ : ಸಿಎಂ ಸೂಚನೆ

ಇದಕ್ಕಾಗಿ ವಿಶೇಷವಾದ ಹಾಗೂ ಅರ್ಥಪೂರ್ಣ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next