Advertisement

ಬಿಜೆಪಿಗೆ ಸುಭಾಷ ರಾಠೊಡ ರಾಜೀನಾಮೆ

07:39 AM Mar 27, 2019 | Team Udayavani |

ಕಲಬುರಗಿ: ಸೋಮವಾರವಷ್ಟೇ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಮಾಜಿ ಸಚಿವ ಬಾಬುರಾವ್‌ ಚವ್ಹಾಣ ರಾಜೀನಾಮೆ ನೀಡಿದ ಬೆನ್ನಲ್ಲೇ ಈಗ ಬಂಜಾರಾ ಸಮುದಾಯದ ಮತ್ತೂಬ್ಬ ಮುಖಂಡ ಸುಭಾಷ ರಾಠೊಡ ಮಂಗಳವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

Advertisement

ಬಂಜಾರಾ ಸಮುದಾಯದ ಡಾ| ಉಮೇಶ ಜಾಧವ್‌ ಕಾಂಗ್ರೆಸ್‌ ಪಕ್ಷಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ್ದರಿಂದ ಇದೀಗ ಬಂಜಾರಾ ಸಮುದಾಯದ ಮುಖಂಡರನ್ನು ಸೆಳೆಯುವ ಮೂಲಕ ಕಾಂಗ್ರೆಸ್‌ ತಿರುಗೇಟು ನೀಡಲು ಮುಂದಾಗಿದೆ. ಬಾಬುರಾವ್‌ ಚವ್ಹಾಣ ಹಾಗೂ ಸುಭಾಷ ರಾಠೊಡ ಶೀಘ್ರವೇ ಕಾಂಗ್ರೆಸ್‌ ಸೇರಲಿದ್ದು, ಮುಂದಿನ ಬೆಳವಣಿಗೆಗಳು ತೀವ್ರ ಕುತೂಹಲ ಮೂಡಿಸಿವೆ

Advertisement

Udayavani is now on Telegram. Click here to join our channel and stay updated with the latest news.

Next