Advertisement

ಸಾರ್ವಜನಿಕರಿಂದ ಅಹವಾಲು ಸಲ್ಲಿಕೆ: ಶಾಸಕ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

12:26 PM Jul 06, 2022 | Team Udayavani |

ಉಳ್ಳಾಲ: ಕಳೆದ ಹಲವಾರು ದಿನಗಳಿಂದ ದಕ್ಷಿಣ ಕನ್ನಡ ಮತ್ತು ಮಲೆನಾಡಿನಾದ್ಯಂತ ವಿಪರೀತ ಮಳೆಯಾಗುತ್ತಿದ್ದು ನೇತ್ರಾವತಿ ನದಿ ಅಪಾಯ ಮೀರಿ ಹರಿಯುತ್ತಿದೆ. ಇದರಿಂದಾಗಿ ಹರೇಕಳ – ಅಡ್ಯಾರು ದೋಣಿ ಸಂಚಾರ ಸ್ಥಗಿತಗೊಳಿಸಲಾಗಿದ್ದು ಸಾರ್ವಜನಿಕರು ಅಡ್ಯಾರು, ಫರಂಗಿಪೇಟೆ ಹಾಗೂ ಮಂಗಳೂರು ತಲುಪಲು ಸುತ್ತಿ ಬಳಸಿಕೊಂಡು ಹೋಗಾಗಬೇಕಾಗಿದೆ. ಈ ಸಂಬಂಧ ಸಾರ್ವಜನಿಕರು ಕಾಮಗಾರಿ ಪ್ರಗತಿಯಲ್ಲಿರುವ ಹರೇಕಳ ಅಣೆಕಟ್ಟು – ಸೇತುವೆಯಲ್ಲಿ ನಡೆದುಕೊಂಡು ಹೋಗಲು ಶಾಸಕರಲ್ಲಿ ಅಹವಾಲು ಸಲ್ಲಿಸಿದ್ದು ಶಾಸಕ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಸುರಕ್ಷತೆಯ ದೃಷ್ಟಿಯಿಂದ ಸೇತುವೆಯಲ್ಲಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದ್ದು, ಈ ಸಂಬಂಧ ಶಾಸಕ ಯು.ಟಿ.ಖಾದರ್ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು,ಸೇತುವೆ ಗುತ್ತಿಗೆದಾರರು, ಕಂದಾಯ ಇಲಾಖೆಯ ಅಧಿಕಾರಿಗಳು, ಪೋಲೀಸ್ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು, ಜನಪ್ರತಿನಿಧಿಗಳೊಂದಿಗೆ ಸ್ಥಳದಲ್ಲಿಯೇ ಚರ್ಚೆ ನಡೆಸಿದರು.

ಇದನ್ನೂ ಓದಿ: ಮೊದಲ ಬಾರಿಗೆ ಹಿಂದೂ ಸಂಪ್ರದಾಯ ಮೂಲಕ ದಾಂಪತ್ಯ ಜೀವನಕ್ಕೆ ಗೇ ಕಪಲ್ಸ್‌!

ಇದಕ್ಕೆ ಸಂಬಂಧಿಸಿದಂತೆ ಪಂಚಾಯತ್ ಕಛೇರಿಯಲ್ಲಿ ಸಭೆ ಕರೆದು ಸಾರ್ವಜನಿಕರ ಸುರಕ್ಷತೆಗೆ ಬೇಕಾದ ಅಗತ್ಯ ಕ್ರಮ ಕೈಗೊಂಡು ನಡೆದುಕೊಂಡು ಹೋಗಲು ಅನುಮತಿ ನೀಡುವಂತೆ ಸೂಚನೆ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next