Advertisement

ಮಾಂಜ್ರಾ ನದಿ ಬ್ಯಾರೇಜ್ ವಸ್ತುಸ್ಥಿತಿ ವರದಿ ಕೊಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್

09:29 AM Jun 21, 2019 | Nagendra Trasi |

ಬೆಂಗಳೂರು: ಔರಾದ್ ತಾಲೂಕಿಗೆ ಕುಡಿಯಲು ಹಾಗೂ ನೀರಾವರಿ ಉದ್ದೇಶಕ್ಕಾಗಿ ನೀರು ಒದಗಿಸಲು ಮಾಂಜ್ರಾ ನದಿಗೆ ಕಟ್ಟಲಾಗಿರುವ ನಾಲ್ಕು ಬ್ಯಾರೇಜ್ ಗಳ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

Advertisement

ಈ ಕುರಿತಂತೆ ಸಾಮಾಜಿಕ ಕಾರ್ಯಕರ್ತ ಗುರುನಾಥ ವದ್ದೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾ. ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಬ್ಯಾರೇಜ್ ಗಳ ಕಾಮಗಾರಿ, ಸದ್ಯದ ಅವುಗಳ ನಿರ್ವಹಣಾ ಸ್ಥಿತಿಗಳ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿ, ವಿಚಾರಣೆಯನ್ನು ಜೂ.27ಕ್ಕೆ ಮುಂದೂಡಿದೆ.

ನೀರಾವರಿಗೆ ಮತ್ತು ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಔರಾದ್ ತಾಲೂಕಿಗೆ ನೀರು ಒದಗಿಸಲು ರಾಜ್ಯ ಸರ್ಕಾರ  ಮಾಂಜ್ರಾ ನದಿಗೆ 271 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಕಡೆ ಬ್ಯಾರೇಜ್ ಗಳನ್ನು ನಿರ್ಮಿಸಿದೆ. ಈ ಬ್ಯಾರೇಜ್ ಗಳು 2013ರಲ್ಲೇ ಉದ್ಘಾಟನೆಗೊಂಡಿದ್ದರೂ,  ಈವರೆಗೆ ನೀರು ಹರಿಸಲಾಗಿಲ್ಲ. ಈ ಬಗ್ಗೆ 2019ರ ಮಾ.8ರಂದು ರಾಜ್ಯ ಸರ್ಕಾರಕ್ಕೆ ಮನವಿ ಕೊಡಲಾಗಿದೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next