Advertisement

ಸುಬ್ರಹ್ಮಣ್ಯ: ನೆಟ್ಟಣದಲ್ಲಿ ಮರ ಬಿದ್ದು ಕಾರುಗಳು ಜಖಂ

11:21 PM May 29, 2023 | Team Udayavani |

ಸುಬ್ರಹ್ಮಣ್ಯ: ಸೋಮವಾರ ರಾತ್ರಿಯ ಗುಡುಗು ಸಹಿತ ಗಾಳಿ ಮಳೆಗೆ ಕಡಬ ತಾಲೂಕಿನ ನೆಟ್ಟಣ ಸಮೀಪ ಹೆದ್ದಾರಿ ಬದಿಯ ಮರಗಳು ಉರುಳಿ ಎರಡು ಕಾರುಗಳ ಮೇಲೆ ಬಿದ್ದ ಪರಿಣಾಮ ಕಾರುಗಳು ಜಖಂಗೊಂಡ ಹಾಗೂ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ಸಂಭವಿಸಿದೆ.

Advertisement

ನೆಟ್ಟಣದ ಕೇಂದ್ರೀಯ ಮರ ಸಂಗ್ರಹಣ ಘಟಕದ ಬಳಿ ಈ ಘಟನೆ ಸಂಭವಿಸಿದೆ. ಭಾರೀ ಗಾಳಿಗೆ ಹೆದ್ದಾರಿ ಬದಿಯ ದೂಪದ ಹಲವು ಮರಗಳು ರಸ್ತೆಗೆ ಬಿದ್ದಿವೆ. ಈ ವೇಳೆ ಸಂಚರಿಸುತ್ತಿದ್ದ ನ್ಯಾನೋ ಹಾಗೂ ಆಮ್ನಿ ಕಾರುಗಳ ಮೇಲೆ ಮರ ಬಿದ್ದಿದೆ ಎಂದು ತಿಳಿದುಬಂದಿದೆ. ಮರ ಕಾರಿನ ಮೇಲ್ಛಾವಣಿಗೆ ಬಿದ್ದು ಸಿಲುಕಿಕೊಂಡಿದೆ. ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪೊಲೀಸ್‌, ಅರಣ್ಯ, ಅಗ್ನಿಶಾಮಕ ದಳ, ಲೋಕೋಪಯೋಗಿ ಇಲಾಖೆ, ಸ್ಥಳೀಯಾಡಳಿತ, ಸ್ಥಳೀಯರ ನೆರವಿನಿಂದ ಮರಗಳ ತೆರವು ಕಾರ್ಯ ನಡೆಸಲಾಗಿದೆ. ತೆರವಿಗೆ ಹರಸಾಹಸ ಪಡಬೇಕಾಯಿತು. ಹಾನಿಗೊಂಡ ಕಾರು ಯಾತ್ರಿಕರದ್ದು ಎಂದು ತಿಳಿದುಬಂದಿದೆ.

ಈ ಭಾಗದಲ್ಲಿ ಹೆದ್ದಾರಿ ಬದಿಯಲ್ಲಿ ದೂಪದ ಮರಗಳು ಅಪಾಯಕಾರಿಯಾಗಿದ್ದು ವರ್ಷಂಪ್ರತಿ ಹೆದ್ದಾರಿಗೆ ಉರುಳುತ್ತ¤, ರಸ್ತೆ ಸಂಚಾರಕ್ಕೆ ತೊಡಕಾಗುತ್ತಿದೆ ಎಂಬ ದೂರು ವ್ಯಕ್ತವಾಗಿದ್ದು, ಅಪಾಯಕಾರಿ ಮರಗಳನ್ನು ಕೂಡಲೇ ಅರಣ್ಯ ಇಲಾಖೆ ತೆರವು ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next