Advertisement

Subrahmanya: ಕಾರಿನಿಂದ ಚಿನ್ನ ಕಳವು ಪ್ರಕರಣ : ಆರೋಪಿ ಬಂಧನ

09:55 PM Oct 11, 2023 | Team Udayavani |

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಚಿನ್ನ, ದಾಖಲೆಗಳ ಬ್ಯಾಗ್‌ ಕಳ್ಳತನ ಮಾಡಿದ್ದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.

Advertisement

ಪ್ರಭಾಕರ ಹೊನ್ನವಳ್ಳಿ ಬಂಧಿತ ಆರೋಪಿ. ಅ. 9ರಂದು ಕೇರಳದ ವ್ಯಕ್ತಿಯೊಬ್ಬರು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದು, ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಕಾರಿನ ಹಿಂಬದಿ ಗಾಜು ಒಡೆದು ಚಿನ್ನ, ದಾಖಲೆ ಇದ್ದ ಬ್ಯಾಗ್‌ ಕಳ್ಳತನ ನಡೆಸಲಾಗಿತ್ತು. ಕಳ್ಳನ ಪತ್ತೆಗಾಗಿ ಮೇಲಧಿಕಾರಿಗಳ ನಿರ್ದೇಶನದಂತೆ ಎರಡು ತಂಡ ರಚಿಸಲಾಗಿತ್ತು. ಸುಬ್ರಹ್ಮಣ್ಯ ಠಾಣಾ ಎಸೈ ಕಾರ್ತಿಕ್‌ ಹಾಗೂ ತನಿಖಾ ಎಸೈ ಮುರಳೀಧರ ನಾಯಕ್‌ ನೇತೃತ್ವದಲ್ಲಿ ಎಎಸೈ ಕರುಣಾಕರ ಹಾಗೂ ಸಿಬಂದಿ ತಂಡ ಸಿಸಿ ಕೆಮರಾ ದೃಶ್ಯಗಳ ಮೂಲಕ ಕಳ್ಳನ ಜಾಡು ಹಿಡಿದು ಸುಬ್ರಹ್ಮಣ್ಯ ಸಮೀಪದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈತನ ಮೇಲೆ ಹೊನ್ನವಳ್ಳಿ ಸೇರಿದಂತೆ ಬೇರೆ ಬೇರೆ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು, ದೇವಸ್ಥಾನಗಳಿಗೆ ಹೋಗಿ ಉಪಾಯದಿಂದ ಯಾರು ಇಲ್ಲದ ಸಮಯ ನೋಡಿಕೊಂಡು ಲೋಹದಂತ ಆಯುಧಗಳನ್ನು ಬಳಸಿ ಕಾರಿನ ಗಾಜುಗಳನ್ನು ಪುಡಿ ಮಾಡಿ ಬೇಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುವ ಚಾಳಿ ಬೆಳೆಸಿಕೊಂಡಿಸಿರುವುದಾಗಿ ತನಿಖೆ ವೇಳೆ ತಿಳಿದು ಬಂದಿದೆ. ಸುಬ್ರಹ್ಮಣ್ಯದಲ್ಲಿ ಈತ ಈ ಹಿಂದೆಯೂ ಒಮ್ಮೆ ಕಳ್ಳತನ ಮಾಡಿದ್ದು ಇತ್ತೀಚೆಗೆ ಧರ್ಮಸ್ಥಳದಲ್ಲೂ ಕಳ್ಳತನ ಮಾಡಿದ್ದ ಬಗ್ಗೆ ತನಿಖೆ ವೇಳೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next