Advertisement

ಸುಬ್ರಹ್ಮಣ್ಯ: ಬಸ್‌ ನಡಿಗೆ ಬಿದ್ದು ಒರ್ವ ಸಾವು, ಇನ್ನೊರ್ವನಿಗೆ ಗಾಯ

07:47 PM Mar 11, 2023 | Team Udayavani |

ಸುಬ್ರಹ್ಮಣ್ಯ: ಬೈಕ್‌ ಸ್ಕಿಡ್‌ ಆಗಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಲಬಾರ್‌ ಬಸ್‌ ನಡಿಗೆ ಬಿದ್ದು ಬೈಕ್‌ ಸವಾರ ಮೃತಪಟ್ಟು ಇನ್ನೊರ್ವ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ(ಮಾ.10) ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಸಂಭವಿಸಿದೆ.

Advertisement

ಮೃತ ವ್ಯಕ್ತಿಯನ್ನು ಸುಬ್ರಹ್ಮಣ್ಯದ ಕಲ್ಲಗುಡ್ಡೆ ನಿವಾಸಿ ರಮೇಶ್‌ (27) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಕಾಸರಗೋಡಿನಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಬಸ್‌ ನ್ನು ಬೈಕ್‌ ಸವಾರ ಓರ್ವ ಟೇಕ್‌ ಮಾಡಿ ಮುಂದೆ ಹೋಗುತ್ತಿದ್ದಾಗ ಬೈಕ್‌ ಸ್ಕಿಡ್‌ ಆಗಿ ಬಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್‌ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇನ್ನೊರ್ವ ಗಾಯಾಳು ಸಣ್ಣ ಪುಟ್ಟ ಗಾಯದಿಂದ ಪಾರಾಗಿರುವುದಾಗಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next