Advertisement

Thirthahalli; ಡಿ.18ರಂದು ರಾಮನಸರ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ

02:53 PM Dec 09, 2023 | keerthan |

ತೀರ್ಥಹಳ್ಳಿ: ತಾಲೂಕಿನ ಹುಂಚದಕಟ್ಟೆ ಗ್ರಾಮದ ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ಡಿ.18ರ ಸೋಮವಾರ 17ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ಆಯೋಜಿಸಲಾಗಿದೆ.

Advertisement

ಅಂದು ಬೆಳಿಗ್ಗೆ ದೇವರಿಗೆ ಗಣಹೋಮ, ಪಂಚ ವಿಂಶತಿ ಕಲಶ, ಕಲಾತತ್ವ ಅಧಿವಾಸ ಹೋಮ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ, ಆಶ್ಲೇಷ ಬಲಿ, ರಾತ್ರಿ ವಿಶೇಷ ಸಿಡಿಮದ್ದು ಪ್ರದರ್ಶನ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ.

ದೇವಸ್ಥಾನದ ಸುತ್ತಮುತ್ತ ವಿದ್ಯುತ್ ಅಲಂಕಾರ ಮತ್ತು ಹೂವಿನ ಅಲಂಕಾರ ಹಾಗೂ 70ಕ್ಕೂ ಹೆಚ್ಚು ಗ್ರಾಮೀಣ ಕಲಾ ತಂಡಗಳಿಂದ ಕಲಾ ಪ್ರದರ್ಶನ ಮತ್ತು ರಾಜಬೀದಿ ಉತ್ಸವ ನಡೆಯಲಿದೆ.

ಅಂದು ಸಂಜೆ 6:30ಕ್ಕೆ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಮಂದಾರ್ತಿ ಇವರಿಂದ ಐದು ಮೇಳಗಳ ಕಾಲಮಿತಿ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನ ವ್ಯವಸ್ಥಾಪಕರಾದ ಸುನಂದಮ್ಮ, ಚಂದ್ರಶೇಖರ್ (ಪುಟ್ಟ), ನಾಗರಾಜ್ ರಾಮನಸರ ಇವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next