Advertisement

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

12:36 AM Jun 03, 2023 | Team Udayavani |

ಸುಬ್ರಹ್ಮಣ್ಯ: ಅನಾರೋಗ್ಯದಿಂದ ಹಠಾತ್‌ ಕುಸಿದು ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ, ರೆಂಜಿಲಾಡಿ ಗ್ರಾಮದ ನಿಡೆ¾àರು ರವೀಂದ್ರ ಅವರ ಪುತ್ರಿ ರಶ್ಮಿತಾ ಎನ್‌. (19) ಮೃತಪಟ್ಟ ಘಟನೆ ರೆಂಜಿಲಾಡಿಯಲ್ಲಿ ಸಂಭವಿಸಿದೆ.

Advertisement

ರಶ್ಮಿತಾ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್‌ ಓದುತ್ತಿದ್ದು, ಕೆಲವು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ವೈದ್ಯಕೀಯ ಪರೀಕ್ಷೆ ವೇಳೆ ಯಾವುದೇ ಸಮಸ್ಯೆ ಕಂಡುಬಂದಿರಲಿಲ್ಲ ಎನ್ನಲಾಗಿದೆ. ಆದರೆ ಜೂ.1ರ ರಾತ್ರಿ ಮನೆಯಲ್ಲಿ ಹಠಾತ್‌ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ನೆಟ್ಟಣ: ನಿರ್ಮಾಣ ಹಂತದ  ಮನೆಯಿಂದ ಬಿದ್ದು ಯುವಕ ಸಾವು
ಕಡಬ: ನಿರ್ಮಾಣ ಹಂತದ ಮನೆಯ ಮೇಲ್ಛಾವಣಿ ಯಿಂದ ಬಿದ್ದು ಕಾರ್ಮಿಕ ನೋರ್ವ ಮೃತಪಟ್ಟ ಘಟನೆ ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿ ಶುಕ್ರವಾರ ಸಂಭವಿಸಿದೆ.
ಆಲಂಕಾರು ಗ್ರಾಮದ ಶರವೂರು ನಗ್ರಿ ನಿವಾಸಿ ಪದ್ಮನಾಭ ಅವರ ಪುತ್ರ ಹರಿಪ್ರಸಾದ್‌ (28) ಮೃತಪಟ್ಟವರು. ನೆಟ್ಟಣದ ಮೇರೊಂಜಿ ಎಂಬಲ್ಲಿ ಮನೆಯ ಮೇಲ್ಛಾವಣಿಯ ಕೆಲಸದಲ್ಲಿ ನಿರತರಾಗಿದ್ದಾಗ ಆಯತಪ್ಪಿ ಕೆಳಗೆ ಬಿದ್ದ ಹರಿಪ್ರಸಾದ್‌ ಅವರ ತಲೆಗೆ ಗಂಭೀರ ಗಾಯ ವಾಗಿತ್ತು. ಕೂಡಲೇ ಅವರನ್ನು ನೆಟ್ಟಣದ ಪ್ರಕಾಶ್‌ ಅವರ ಜೀಪಿನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ವೇಳೆಗಾಗಲೇ ಅವರ ಮೃತಪಟ್ಟಿದ್ದರು.

ಪದ್ಮನಾಭ ಅವರ ಏಕೈಕ ಪುತ್ರರಾಗಿದ್ದ ಹರಿಪ್ರಸಾದ್‌ ದುಡಿಮೆಯೇ ಮನೆಗೆ ಆಧಾರವಾಗಿತ್ತು. ಅವರಿಗೆ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ತಂದೆ, ಪತ್ನಿ, ಸಹೋದರಿಯನ್ನು ಅಗಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next