Advertisement

Subrahmanya: ಇನ್ನೂ ಸಿಗದ ನೆರೆ ನೀರಲ್ಲಿ ಕೊಚ್ಚಿ ಹೋದ ಆನೆ ಮೃತದೇಹ

12:35 AM Jul 17, 2024 | Team Udayavani |

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಮಾರಧಾರಾ ನದಿಯ ನೆರೆ ನೀರಿನಲ್ಲಿ ಆನೆ ಮೃತದೇಹ ತೇಲಿ ಹೋದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

Advertisement

ನಿರಂತರ ಮಳೆಯಿಂದ ಕುಮಾರ ಧಾರಾ ನದಿ ತುಂಬಿ ಹರಿಯುತ್ತಿದ್ದು, ನೀರಿನ ಮಟ್ಟವನ್ನು ವೀಕ್ಷಿಸಲು ಸೋಮ ವಾರ ತಡ ರಾತ್ರಿ ಮನ್ಮಥ ಬಟ್ಟೋಡಿ ಮತ್ತಿತರರು ತೆರಳಿದ್ದ ವೇಳೆ ನೆರೆ ನೀರಿನಲ್ಲಿ ಏನೋ ತೇಲಿಬರುತ್ತಿರುವುದು ಕಂಡುಬಂದಿತ್ತು.

ಸೂಕ್ಷ್ಮವಾಗಿ ಗಮನಿಸಿದಾಗ ಆನೆಯ ಮೃತದೇಹ ಎಂಬುದು ತಿಳಿದು ಬಂದಿದೆ. ಆನೆ ಕೆಲವು ದಿನಗಳ ಹಿಂದೆಯೇ ಸತ್ತು ಈ ಭಾಗಕ್ಕೆ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ. ಆನೆ ಮೃತದೇಹ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಪತ್ತೆಯಾಗಿಲ್ಲ.

ಹುಡುಕಾಟದ ಪ್ರಯತ್ನ
ಆನೆ ಮೃತದೇಹವನ್ನು ಅರಣ್ಯ ಇಲಾಖೆ ವತಿಯಿಂದ ಪತ್ತೆ ಹಚ್ಚುವ ಕಾರ್ಯಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಿರು ವುದರಿಂದ ಹುಡುಕಾಟಕ್ಕೆ ಹಿನ್ನೆಡೆಯಾಗಿದೆ. ಮಂಗಳವಾರ ಸಂಜೆವರೆಗೂ ಪತ್ತೆಯಾಗಿರಲಿಲ್ಲ. ನೀರಿನ ಮಟ್ಟ ಇಳಿಕೆ ಆದ ಬಳಿಕ ಮೃತ ದೇಹ ಪತ್ತೆಯಾಗುವ ಸಾಧ್ಯತೆ ಇದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next