Advertisement

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

02:40 PM Jun 25, 2024 | Team Udayavani |

ಸುಬ್ರಹ್ಮಣ್ಯ: ರಾಜ್ಯದಲ್ಲಿ  ಹೆಚ್ಚುವರಿ ಡಿಸಿಎಂ ಹುದ್ದೆ ಚರ್ಚೆಗೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಇನ್ನೊಮ್ಮೆ ಮಾತನಾಡೋಣ ಎಂದು ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಗುತ್ತಾ ಉತ್ತರಿಸಿದ ಘಟನೆ ಜೂ. 25ರ ಮಂಗಳವಾರ ನಡೆದಿದೆ.

Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಹಲವು ವಿಚಾರಗಳ ಬಗ್ಗೆ ಮಾತನಾಡುತ್ತಿದ್ದ ವೇಳೆ ಮೂರು ಡಿಸಿಎಂ ಹುದ್ದೆ ಬೇಡಿಕೆ ಚರ್ಚೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್ ಅವರು ಇಷ್ಟನ್ನು ಬರೆಯಿರಿ ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ ಎಂದು ನಗುತ್ತಾ ಉತ್ತರಿಸಿದರು.

ನಾನು ನನ್ನ ಕುಟುಂಬ ಸಮೇತ ಕುಕ್ಕೆಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಎಲ್ಲರ ಶಾಂತಿ ನೆಮ್ಮದಿಗಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಮಳೆ ಕಡಿಮೆಯಾಗಿದ್ದು ನೀರಿನ ಸಮಸ್ಯೆಯಾಗಿದೆ. ಮಳೆ ಬರಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದರು.

ಸುಬ್ರಹ್ಮಣ್ಯದಲ್ಲಿ ಸುಸಜ್ಜಿತ ಅಸ್ಪತ್ರೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಚರ್ಚಿಸುತ್ತೇವೆ. ಬೇಡಿಕೆ ಈಡೇರಿಸಲು ಪರಿಶೀಲಿಸುತ್ತೇವೆ ಎಂದರು.

Advertisement

ಬಿಜೆಪಿಯ ಪ್ರೀತಂ ಗೌಡ ವಿಡಿಯೋ ವೈರಲ್ ಸಂಬಂಧ ಪ್ರಕರಣ ದಾಖಲಾಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next