Advertisement

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

11:55 PM Jun 16, 2024 | Team Udayavani |

ಸುಬ್ರಹ್ಮಣ್ಯ: ಎದುರಿನಿಂದ ಬಂದ ವಾಹನಕ್ಕೆ ಢಿಕ್ಕಿ ಆಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ ಜಖಂಗೊಂಡ ಘಟನೆ ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿಯ ಕುಲ್ಕುಂದದ ವಲಯ ಅರಣ್ಯಾಧಿಕಾರಿ ಕಚೇರಿ ಬಳಿ ರವಿವಾರ ಸಂಭವಿಸಿದೆ.

Advertisement

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಯಾತ್ರಿಕರ ಕಾರು ಕುಲ್ಕುಂದ ಸಮೀಪ ಎದುರಿನಿಂದ ಬಂದ ವಾಹನಕ್ಕೆ ಢಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿದೆ.

ಘಟನೆಯಲ್ಲಿ ವಿದ್ಯುತ್‌ ಕಂಬ ಮುರಿದಿದ್ದು, ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ಸ್ಥಳದಲ್ಲೇ ಇದ್ದ ಅವಸರವೇ ಅಪಘಾತಕ್ಕೆ ಕಾರಣ ನಿಧಾನವಾಗಿ ಚಲಿಸಿ ಎಂಬ ಫಲಕಕ್ಕೂ ಕಾರು ಗುದ್ದಿದೆ.

Advertisement

Udayavani is now on Telegram. Click here to join our channel and stay updated with the latest news.

Next