Advertisement
ಸುಬ್ರಹ್ಮಣ್ಯ ಸಮೀಪದ ಯೇನೆಕಲ್ಲು ಗ್ರಾಮದ ಮಾಣಿಬೈಲು ನಿವಾಸಿ ಕೃಷ್ಣ ನಾಯ್ಕ ಅವರ ಮನೆ ಮೇಲೆ ಬೃಹತ್ ಗಾತ್ರದ ಮರ ಉರುಳಿಬಿದ್ದು ಮನೆ ಸಂಪೂರ್ಣ ಹಾನಿಗೊಂಡಿದೆ. ಮರ ಬೀಳುವ ವೇಳೆ ಮನೆಯ ಒಳಗಡೆ ಮೂವರು ಇದ್ದರು. ಘಟನೆಯಲ್ಲಿ ಕೃಷ್ಣ ನಾಯ್ಕ ಮತ್ತು ಅವರ ಪತ್ನಿ ಜಯಂತಿ ಅವರಿಗೆ ಅಲ್ಪ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿ ದ್ದಾರೆ. ಗಾಯಾಳುಗಳನ್ನು ತತ್ಕ್ಷಣ ಸ್ಥಳಿಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.
ಕಲ್ಮಡ್ಕ ಗ್ರಾಮದ ಕುಳೈತ್ತೋಡಿಯಲ್ಲಿ ರಮೇಶ ಅವರ ಮನೆ ಮೇಲೆ ಆಲದ ಮರ ಉರುಳಿ ಬಿದ್ದು ಭಾರೀ ನಷ್ಟ ಸಂಭವಿಸಿದೆ. ಘಟನೆ ವೇಳೆ ಮನೆಯೊಳಕ್ಕೆ ಪತ್ನಿ ಮೋಹಿನಿ ಮತ್ತು ಮಕ್ಕಳಿದ್ದರು. ಮರ ಬೀಳುವ ಸುಳಿವು ಅರಿತ ರಮೇಶ ತತ್ಕ್ಷಣ ಪತ್ನಿ ಮತ್ತು ಮಕ್ಕಳನ್ನು ಹೊರಕ್ಕೆ ಎಳೆದೊಯ್ದಿದ್ದು ಅಂಗಳಕ್ಕೆ ತಲುಪುತ್ತಿದ್ದಂತೆ ಮರ ಮನೆ ಮೇಲೆ ಬಿದ್ದಿದೆ.
Related Articles
Advertisement
ಹರಿಹರ ಪಳ್ಳತ್ತಡ್ಕ ಗ್ರಾಮದ ಶಾಂತಿ ಅವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಮನೆಯ ಗೋಡೆ ಹಾಗೂ ಛಾವಣಿಗೆ ಹಾನಿಯಾಗಿದೆ. ಪಕ್ಕದ ಗ್ರಾಮದ ಕಿರಿಭಾಗ ಬಳಿ ಸೇತುವೆಗೆ ಅಡ್ಡಲಾಗಿ ದೊಡ್ಡ ಗಾತ್ರದಮರ ಉರುಳಿಬಿದ್ದು ಸೇತುವೆಗೆ ಭಾಗಶಃ ಹಾನಿಯಾಗಿದೆ. ಈ ಭಾಗದ ಅನೇಕ ಮಂದಿ ಕೃಷಿಕರ ತೋಟಗಳಲ್ಲಿ ಅಡಿಕೆ ಮರಗಳು ನೆಲಕಚ್ಚಿದ್ದು ಅಪಾರ ಹಾನಿ ಸಂಭವಿಸಿದೆ. ರಬ್ಬರ್ ಗಿಡಗಳು ನೆಲಸಮಗೊಂಡಿವೆ.ಹಲವು ಕಡೆ ಮರ ಬಿದ್ದು ವಿದ್ಯುತ್ ತಂತಿ ತುಂಡಾಗಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.