Advertisement

‘ಸರಿಗಮಪ’ಖ್ಯಾತಿಯ ಪೊಲೀಸ್ ಸುಬ್ರಹ್ಮಣ್ಯ ಪತ್ನಿ ಕೋವಿಡ್ ನಿಂದ ಸಾವು

09:02 AM May 11, 2021 | Team Udayavani |

ಬೆಂಗಳೂರು : ಕನ್ನಡ ಸರಿಗಮಪ ಖ್ಯಾತಿಯ ಹೆಡ್ ಕಾನ್ ಸ್ಟೇಬಲ್ ಸುಬ್ರಹ್ಮಣ್ಯ ಅವರ ಪತ್ನಿ ಕೋವಿಡ್ ಮಹಾಮಾರಿಗೆ  ಬಲಿಯಾಗಿದ್ದಾರೆ. ಸರಿಗಮಪ ಶೋನಿಂದ ಸುಬ್ರಹ್ಮಣ್ಯ ಹೆಸರು ಮಾಡಿದ್ದರು.

Advertisement

ಸುಬ್ರಹ್ಮಣ್ಯ ಪತ್ನಿ ಜ್ಯೋತಿ ಅವರಿಗೆ ಕಳೆದ ಒಂದು ವಾರದ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಕಳೆದ ಎರಡು ದಿನಗಳ ಹಿಂದೆ ಜ್ಯೋತಿ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ.  ಚಿಕಿತ್ಸೆಗಾಗಿ ಬೆಂಗಳೂರಿನ ಹಲವು ಆಸ್ಪತ್ರೆಗಳಲ್ಲಿ ಓಡಾಡಿದರೂ ಕೂಡ  ವೆಂಟಿಲೇಟರ್ ಬೆಡ್ ಸಿಗದೆ ಪರದಾಡಿದ್ದಾರೆ.

ನಂತರ ಹೊಸಕೋಟೆಯ ಸಿಲಿಕಾನ್ ಸಿಟಿಯ ಆಸ್ಪತ್ರೆಗೆ ಜ್ಯೋತಿಯವರನ್ನು ದಾಖಲಿಸಿದ್ದರು.   ಚಿಕಿತ್ಸೆ ಫಲಕಾರಿಯಾಗದೆ ಸುಬ್ರಹ್ಮಣ್ಯ ಪತ್ನಿ ನಿನ್ನೆ (ಮೇ 10) ಸಾವನ್ನಪ್ಪಿದ್ದಾರೆ.

ಸುಬ್ರಹ್ಮಣ್ಯ ಅವರು ಕೋಲಾರ ಮೂಲದವರಾಗಿದ್ದು, ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next