Advertisement

“ಜೀವನ‌ದ ಯಶಸ್ಸಿಗೆ ಶ್ರದ್ಧೆ, ಪ್ರಾಮಾಣಿಕತೆ ಅಗತ್ಯ’

09:36 PM Mar 18, 2020 | Sriram |

ಬ್ರಹ್ಮಾವರ: ಪ್ರಾಮಾಣಿಕತೆ, ಶ್ರದ್ಧೆ, ತಾಳ್ಮೆ, ಇಚ್ಛಾಶಕ್ತಿ ಮತ್ತು ಕಠಿನ ಪರಿಶ್ರಮ ಈ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಯಶಸ್ಸು ನಿಶ್ಚಿತ ಎಂದು ಮೂಡುಬಿದಿರೆ ಶಿರ್ತಾಡಿಯ ಭುವನಜ್ಯೋತಿ ರೆಸಿಡೆನ್ಶಿಯಲ್‌ ಸ್ಕೂಲ್‌ಪ್ರಾಂಶುಪಾಲೆ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿನಿ ಲತಾ ಆಚಾರ್ಯ ಹೇಳಿದರು.

Advertisement

ಅವರು ಬ್ರಹ್ಮಾವರ ಕ್ರಾಸ್‌ಲ್ಯಾಂಡ್‌ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭ ನಡೆದ ಕಾರ್ಯಕ್ರಮದಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದರು.

ಉತ್ತಮ ನಡತೆ ಒಳ್ಳೆಯ ಚಿಂತನೆ, ಒಳ್ಳೆಯ ನಡತೆ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಮಾಜದಲ್ಲಿ ಬದುಕಲು ಸಾಧ್ಯ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ| ಸ್ಯಾಮುಯೆಲ್‌ ಕೆ. ಸ್ಯಾಮುಯೆಲ್‌, ಉಪಪ್ರಾಂಶುಪಾಲೆ ಪ್ರೊ| ಎಲಿಜಬೆತ್‌ ರಾಯ್‌ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಂಗವಿಕಲ ವಿದ್ಯಾರ್ಥಿನಿ ಸಾರಾ ಶರೋಲ್‌ ರೇಶ್ಮಾ ಅನ್ನಮ್ಮ ಅವರನ್ನು ಸಮ್ಮಾನಿಸಲಾಯಿತು.ವಿದ್ಯಾರ್ಥಿನಿ ಸಲ್ವಾ ಸ್ವಾಗತಿಸಿ,ಮಹಿಳಾ ವೇದಿಕೆಯ ಸಂಚಾಲಕಿ ಸ್ಮಿತಾ ಮೈಪಾಡಿ ಪ್ರಾಸ್ತಾ ವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿಯರಾದ ಸುರಭಿ ವಂದಿಸಿ, ಅರ್ಚನಾ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next