Advertisement

Politics: ತೆಲಂಗಾಣದಲ್ಲೂ ಯಶಸ್ಸು ಖಚಿತ: ಸಿದ್ದರಾಮಯ್ಯ 

10:22 PM Nov 26, 2023 | Team Udayavani |

ಹೈದರಾಬಾದ್‌: ಕರ್ನಾಟಕ ಮಾದರಿಯ ಖಾತ್ರಿಗಳು ತೆಲಂಗಾಣದಲ್ಲೂ ಪ್ರಭಾವ ಬೀರಲಿವೆ, ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ. ನ್ಯೂಸ್‌18ಕ್ಕೆ ಸಂದರ್ಶನ ನೀಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಎಲ್ಲ ಭರವಸೆಗಳನ್ನು ಈಡೇರಿಸಿದೆ. ತೆಲಂಗಾಣದಲ್ಲೂ ಅದನ್ನು ಯಶಸ್ವಿಯಾಗಿ ಜಾರಿ ಮಾಡಲಾಗುತ್ತದೆ ಎಂದರು.

Advertisement

ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಬಿಆರ್‌ಎಸ್‌ ನಾಯಕ ಕೆ.ಚಂದ್ರಶೇಖರ ರಾವ್‌, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ “ಕೆ.ಚಂದ್ರಶೇಖರ ರಾವ್‌ ಅವರಿಗೆ ಸೋಲಿನ ಭೀತಿ ಇದೆ’ ಎಂದರು.

ತೆಲಂಗಾಣದಲ್ಲಿ ಎಷ್ಟು ಸ್ಥಾನಗಳಲ್ಲಿ ಕಾಂಗ್ರೆಸ್‌ ಜಯಗಳಿಸಲಿದೆ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ “ನಮ್ಮ ಪಕ್ಷಕ್ಕೆ ಬಹುಮತ ಸಿಗಲಿದೆ’ ಎಂದಷ್ಟೇ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next