Advertisement

ನಿಮ್ಮ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ : ಕಹಿ ಘಟನೆಯ ಬಳಿಕ ನಟ ದರ್ಶನ್

10:59 PM Dec 21, 2022 | Team Udayavani |

ಬೆಂಗಳೂರು : ಹೊಸಪೇಟೆಯಲ್ಲಿ ʼಕ್ರಾಂತಿʼ ಸಿನಿಮಾದ ಹಾಡು ಬಿಡುಗಡೆಯ ವೇಳೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆಯ ಬಳಿಕ ಸಾವಿರಾರು ಮಂದಿ ಅಭಿಮಾನಿಗಳು, ಚಿತ್ರ ರಂಗದ ಗಣ್ಯರು ಧೈರ್ಯ ತುಂಬಿದ್ದಕ್ಕಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧನ್ಯವಾದ ಸಲ್ಲಿಸಿದ್ದಾರೆ.

Advertisement

ಫೇಸ್ ಬುಕ್ ಮತ್ತು ಟ್ವೀಟ್ ಮೂಲಕ ಧನ್ಯವಾದ ಸಲ್ಲಿಸಿರುವ ದರ್ಶನ್ ”ಈ ಸಮಯದಲ್ಲಿ ನನಗಿಂತಲೂ ನನ್ನ ಸೆಲೆಬ್ರಿಟಿಗಳಿಗೆ ಹೆಚ್ಚು ನೋವಾಗಿದೆ ಎಂಬ ಅರಿವು ನನಗಿದೆ. ಇಂಥ ಘಟನೆಗಳು ಒಬ್ಬ ವ್ಯಕ್ತಿಯನ್ನು ಮತ್ತಷ್ಟು ಬಲಪಡಿಸುತ್ತದೆಯೇ ಹೊರತೂ ಬಲಹೀನನನ್ನಾಗಿ ಮಾಡುವುದಿಲ್ಲ. ಅದಕ್ಕೆ ತಕ್ಕ ಉದಾಹರಣೆಗಳು ನಮ್ಮ ಕನ್ನಡ ನೆಲದಲ್ಲೇ ನೋಡಿದ್ದೇವೆ. ಈ ಸಮಯದಲ್ಲಿ ನ್ಯಾಯದ ಪರ ನಿಂತ ಪ್ರತಿಯೊಬ್ಬ ಚಿತ್ರರಂಗದ ಗೆಳೆಯರು, ನಟರಿಗೆ ಧನ್ಯವಾದಗಳು. ಈ ಘಟನೆಯನ್ನು ತಪ್ಪು ಹಾದಿಯಲ್ಲಿ ಪ್ರೇರೇಪಿಸಲು ಪ್ರಯತ್ನಿಸಿದ ಕೆಲವರಿಗೂ ಧನ್ಯವಾದಗಳು” ಎಂದು ಬರೆದಿದ್ದಾರೆ.

”ಮೊದಲಿಂದಲೂ ಹೇಳಿಕೊಂಡು ಬಂದಿದ್ದೇನೆ, ಹಾಳು ಮಾಡೋಕೆ ನೂರು ಜನ ಇದ್ರೆ, ಕಾಯೋಕೆ ನಮ್ಮ ಕೋಟ್ಯಂತರ ಸೆಲೆಬ್ರಿಟಿಗಳಿರುತ್ತಾರೆ. ನಿಮ್ಮ ಈ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ” ಎಂದು ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next