Advertisement

Goa; ಸುಚನಾ ಸೇಠ್ ವಿಚ್ಛೇದಿತ ಪತಿ ಹೇಳಿಕೆ ದಾಖಲಿಸಿದ ಪೊಲೀಸರು

07:50 PM Jan 13, 2024 | Team Udayavani |

ಪಣಜಿ: ತನ್ನ ನಾಲ್ಕು ವರ್ಷದ ಮಗುವನ್ನು ಬರ್ಬರವಾಗಿ ಹತ್ಯೆಗೈದ ಆರೋಪ ಹೊತ್ತಿರುವ ಎಐ ಸ್ಟಾರ್ಟ್‌ಅಪ್ ಸಿಇಒ ಸುಚನಾ ಸೇಠ್ ಳ  ವಿಚ್ಛೇದಿತ ಪತಿ ವೆಂಕಟ್ ರಾಮನ್ ಅವರು  ಶನಿವಾರ ವಿಚಾರಣೆಯ ಭಾಗವಾಗಿ ಗೋವಾದ ಕಲಾಂಗುಟ್ ಪೊಲೀಸರ ಮುಂದೆ ಹಾಜರಾಗಿದ್ದಾರೆ.

Advertisement

ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಸೇಠ್ ತನ್ನ ಮಗನನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಂದು, ಶವವನ್ನು ಬ್ಯಾಗ್‌ನಲ್ಲಿ ತುಂಬಿ ಬೆಂಗಳೂರಿಗೆ ಹಿಂತಿರುಗಲು ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದಳು. ಜನವರಿ 8 ರಂದು ಚಿತ್ರದುರ್ಗದಲ್ಲಿ ಬಂಧಿಸಲಾಗಿತ್ತು.

“ವೆಂಕಟ್ ರಾಮನ್ ಮಧ್ಯಾಹ್ನ ಬೆಂಗಳೂರಿನಿಂದ ಆಗಮಿಸಿ ಕಲಾಂಗುಟ್ ಠಾಣೆಗೆ ಬಂದಿದ್ದು, ತನಿಖೆಯ ಭಾಗವಾಗಿ ನಾವು ಪ್ರಕರಣದಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತೇವೆ ಎಂದು ಅಧಿಕಾರಿ ಹೇಳಿದ್ದಾರೆ. ಕೊಲೆ ನಡೆದಾಗ ರಾಮನ್ ಇಂಡೋನೇಷ್ಯಾದ ಜಕಾರ್ತದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next