Advertisement

ಭಾರತೀಯ ಅರಣ್ಯ ಸೇವೆಗೆ ಸುಚೇತ್ ಬಾಳ್ಕಲ್ ಆಯ್ಕೆ

10:29 PM Jul 01, 2023 | Team Udayavani |

ಯಲ್ಲಾಪುರ: ತಾಲೂಕಿನ ಸುಚೇತ್ ಬಾಳ್ಕಲ್ ಯುಪಿಎಸ್‌ಸಿ ನಡೆಸುವ ಸಿವಿಲ್ ಸರ್ವಿಸ್ ನ ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ 30 ನೇ ರ‍್ಯಾಂಕ್ ಗಳಿಸುವ ಮೂಲಕ ರಾಜ್ಯಕ್ಕೆ ಹಾಗೂ ಯಲ್ಲಾಪುರ ತಾಲೂಕಿಗೆ ಹೆಮ್ಮೆ ತಂದಿರುತ್ತಾರೆ.

Advertisement

ಯುಪಿಎಸ್‌ಸಿನಡೆಸುವ ಸಿವಿಲ್ ಸರ್ವಿಸ್ ನ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಮೂಲಕ ಭಾರತೀಯ ಅರಣ್ಯಸೇವೆಗೆ ಆಯ್ಕೆಯಾದ ಇವರು ಮೈನ್ಸ್ ಮತ್ತು ಸಂದರ್ಶನದಲ್ಲೂ ಜಯಗಳಿಸಿ ಈ ಸಾಧನೆಗೈದಿರುತ್ತಾರೆ.

ಬೆಂಗಳೂರಿನ ಪ್ರಸಿದ್ಧ ಆರ್.ವಿ ಇಂಜಿನಿಯರಿಂಗ್ ಕಾಲೇಜು ನಲ್ಲಿ ಪದವಿ ಪಡೆದಿರುವ ಇವರು ಪ್ರತಿಷ್ಠಿತ ಕಂಪೆನಿಗಳಲ್ಲಿ ದೊರೆತ ಕೆಲಸಗಳಿಗೆ ಸೀಮಿತಗೊಳ್ಳದೇ ನಾಗರಿಕ ಸೇವೆಗಳ ಪರೀಕ್ಷಾ ತಯಾರಿಯಲ್ಲಿ ಕಳೆದ ಮೂರು ವರ್ಷಗಳಿಂದ ತೊಡಗಿಕೊಂಡಿದ್ದರು. ನಾಲ್ಕು ದಶಕಗಳ ಇತಿಹಾಸ ಹೊಂದಿದ ಪಟ್ಟಣದ ಚೇತನಾ ಪ್ರಿಂಟರ್ಸ್ ನ ಮಾಲಕ,ಪತ್ರಕರ್ತರೂ ಆಗಿದ್ದ ಮಂಚಿಕೇರಿಯ ಬಾಳ್ಕಲ್ ನ ರಾಮಕೃಷ್ಣ ಮತ್ತು ಶ್ರೀಮತಿ ಬಾಳ್ಕಲ್ ಪುತ್ರರಾಗಿರುವ ಇವರು ಈ ಹಿಂದೆ ರಾಜ್ಯ ಮಟ್ಟದ ಕ್ವಿಜ್ ಮತ್ತು ಚರ್ಚೆಗಳಲ್ಲಿ ಭಾಗವಹಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದನ್ನು ಮತ್ತು ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುವುದನ್ನು ಇಲ್ಲಿ ಸ್ಮರಿಸಬಹುದು. ಇವರ ಸಹೋದರಿ ಸಹನಾ ಬಾಳ್ಕಲ್ ಕೂಡ ಕರ್ನಾಟಕ ಆರ್ಥಿಕ ಇಲಾಖೆಯಲ್ಲಿ ಉಪ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಒಂದೇ ಕುಟುಂಬದಿಂದ ಇಬ್ಬರು ನಾಗರಿಕ ಸೇವೆಗೆ ಆಯ್ಕೆಯಾಗಿರುವುದು ವಿಶೇಷ.

Advertisement

Udayavani is now on Telegram. Click here to join our channel and stay updated with the latest news.

Next