Advertisement

ಸುಡಾನ್‌ನಲ್ಲಿ ಭಾರತೀಯರಿಗೆ ಆಹಾರ, ನೀರಿನ ಕೊರತೆ: ಹೋಟೆಲ್‌ಗ‌ಳಲ್ಲಿ ವಿದ್ಯುತ್‌ ಕೊರತೆ

10:55 PM Apr 20, 2023 | Team Udayavani |

ಖಾರ್ತೋಮ್‌/ನವದೆಹಲಿ: ಆಂತರಿಕ ಸಂಘರ್ಷದಿಂದ ಜರ್ಝರಿತವಾಗಿರುವ ಸುಡಾನ್‌ನಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರಿಗೆ ಅನ್ನ, ನೀರು ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಉಂಟಾಗಿದೆ. ಅವರು ವಾಸ್ತವ್ಯ ಹೂಡಿರುವ ಹೋಟೆಲ್‌ಗ‌ಳಿಗೆ ಬಿರುಸಿನ ಗುಂಡು ಹಾರಾಟದಿಂದಾಗಿ ವಿದ್ಯುತ್‌ ಪೂರೈಕೆಯೂ ಸ್ಥಗಿತಗೊಂಡಿದೆ. ಕಳೆದ ಐದು ದಿನಗಳಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ಭಾರತೀಯರೊಬ್ಬರು ಹೇಳಿಕೊಂಡಿದ್ದಾರೆ. ಕರ್ನಾಟಕದ 31 ಮಂದಿ ಸೇರಿದಂತೆ ಸರಿ ಸುಮಾರು 1,500 ಮಂದಿ ಭಾರತೀಯರು ಸಿಕ್ಕಿ ಹಾಕಿಕೊಂಡಿದ್ದಾರೆ. ಕೇರಳದ ಮೂಲದ ವ್ಯಕ್ತಿ ಸುಡಾನ್‌ ಸೇನೆ ಮತ್ತು ಅರೆಸೇನೆ ನಡುವಿನ ಕಾಳಗದಲ್ಲಿ ಅಸುನೀಗಿದ್ದಾರೆ.

Advertisement

300ಕ್ಕೂ ಅಧಿಕ ಸಾವು:
ಸುಡಾನ್‌ ಸೇನೆ ಹಾಗೂ ಅರಸೇನೆ ಪಡೆಗಳ ನಡುವಿನ ಸಂಘರ್ಷದಿಂದಾಗಿ ಈಗಾಗಲೇ 300ಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದಾರೆ. ಕಾಳಗದಲ್ಲಿ 3,200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕದನವಿರಾಮ ಘೋಷಿಸಿ, ಶಾಂತಿ ಮಾತುಕತೆ ನಡೆಸುವಂತೆ ರ್ಯಾಪಿಡ್‌ ಸಪೋರ್ಟ್‌ ಫೋರ್ಸ್‌ (ಆರ್‌ಎಸ್‌ಎಫ್ ) ಘಟಕ ಸಲಹೆ ನೀಡಿತ್ತು. ಆದರೆ, ಸಲಹೆ ನಿರಾಕರಿಸಿರುವ ಸೇನೆ ಯಾವುದೇ ಕಾರಣಕ್ಕೂ ಅಧಿಕಾರದ ವಿಚಾರದಲ್ಲಿ ರಾಜಿಯಾಗುವುದಿಲ್ಲವೆಂದು ಸ್ಪಷ್ಟ ಪಡಿಸಿದೆ.

ಪರಿಸ್ಥಿತಿ ಬಿಗುವಿನಿಂದ ಕೂಡಿದೆ….
ಸುಡಾನ್‌ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವುದೇ ಸರ್ಕಾರದ ಆದ್ಯತೆ. ಈ ನಿಟ್ಟಿನಲ್ಲಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಜತೆಗೆ ಮಾತುಕತೆ ನಡೆಸಲಿದ್ದಾರೆ ಎಂದು ಸಚಿವಾಲಯದ ವಕ್ತಾರ ಅರಿಂಧಮ್‌ ಬಗಿc ನವದೆಹಲಿಯಲ್ಲಿ ತಿಳಿಸಿದ್ದಾರೆ. ಸದ್ಯ ಆ ದೇಶದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಅಲ್ಲಿನ ಸ್ಥಳೀಯ ಪರಿಸ್ಥಿತಿ ಸುಧಾರಿಸಬೇಕಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next