Advertisement

ಅಗಲಿದ ಅಭಿಮಾನಿ ಕುಟುಂಬಕ್ಕೆ ಸುದೀಪ್‌ ಸಾಂತ್ವನ

10:28 AM Dec 22, 2019 | Lakshmi GovindaRaj |

ಅಪ್ಪಟ ಅಭಿಮಾನಿಯೊಬ್ಬರು ರಸ್ತೆ ಅಪಘಾತದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ನಟ ಸುದೀಪ್‌ ಅವರು ಶುಕ್ರವಾರ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಸುದೀಪ್‌ ಅವರ ಅಭಿಮಾನಿಯಾಗಿದ್ದ ನಂದೀಶ್‌ ಅವರು ಎರಡು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡು, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫ‌ಲಕಾರಿಯಾಗದೆ ಅವರು ಡಿ.19 ರಂದು ನಿಧನರಾಗಿದ್ದರು.

Advertisement

ಈ ಕುರಿತು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ನೋವು ಹಂಚಿಕೊಂಡಿದ್ದ ಸುದೀಪ್‌, ಮೃತ ಅಭಿಮಾನಿ ನಂದೀಶ್‌ ಅವರ ಮನೆಗೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇನ್ನು , ಸುದೀಪ್‌ ಅವರು ಟ್ವಿಟ್ಟರ್‌ನಲ್ಲಿ ನೋವು ಹಂಚಿಕೊಂಡಿದ್ದು, ತಮ್ಮ ಟ್ವಿಟ್ಟರ್‌ ಡಿಪಿಯನ್ನು ಸಹ ನಂದೀಶ್‌ ಫೋಟೋ ಹಾಕುವ ಮೂಲಕ ಬದಲಿಸಿ, ಸಂತಾಪ ಸೂಚಿಸಿದ್ದಾರೆ.

ಹಾಗೆಯೇ “ನನ್ನ ಸಹೋದರ ಸ್ಥಾನದಲ್ಲಿದ್ದ ನಂದೀಶ್‌ ಅವರ ಸಾವಿನ ಸುದ್ದಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ನಮ್ಮೊಂದಿಗೆ ಇದ್ದರು. ತುಂಬ ಮಿಸ್‌ ಮಾಡಿಕೊಳ್ಳುತ್ತಿದ್ದೇವೆ. ಇದು ತುಂಬಲಾರದ ನಷ್ಟ. ನಿಮ್ಮ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಕುಟುಂಬಕ್ಕೆ ನೀಡಲಿ’ ಎಂದು ಬರೆದುಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next