Advertisement

ಸಹೋದರನಂತಿದ್ದ ಅಭಿಮಾನಿ ಸಾವು: ಕಂಬನಿ ಮಿಡಿದ ಕಿಚ್ಚ ಸುದೀಪ್

12:31 PM Dec 20, 2019 | Mithun PG |

ಬೆಂಗಳೂರು: ಸ್ಯಾಂಡಲ್ ವುಡ್ ಬಾದ್ ಶಾ ಕಿಚ್ಚ ಸುದೀಪ್ ಅವರ ಅಪ್ಪಟ ಅಭಿಮಾನಿಯಾಗಿದ್ದ ನಂದೀಶ್ ಗುರುವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಎರಡು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಂದೀಶ್ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು. ಈ ಹಿನ್ನಲೆಯಲ್ಲಿ ಸುದೀಪ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ನಂದೀಶ್ ಅನೇಕ ವರ್ಷಗಳಿಂದ ಕಿಚ್ಚ ಸುದೀಪ್ ಸೇನಾ ಸಮಿತಿಯ ರಾಜ್ಯ ಕಾರ್ಯದರ್ಶಿಯಾಗಿ  ಕಾರ್ಯ ನಿರ್ವಹಿಸುತ್ತಿದ್ದರು. ನಂದೀಶ್ ನನ್ನ ಸಹೋದರನಂತೆ ಇದ್ದರು. ಆದರೇ ಇನ್ನಿಲ್ಲ ಎನ್ನುವ ಸತ್ಯ ಅರಗಿಸಿಕೊಳ್ಳಲು ಸಾಧ್ಯವಿಲ್ಲ . ಅವರ ಕುಟುಂಬಕ್ಕೆ ದುಃಖವನ್ನು ಭರಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ.

ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯ ಡಿಪಿಯನ್ನು ಕೂಡ ಬದಲಾಯಿಸಿ ಸಂತರಾಪ ಸೂಚಿಸಿದ್ದಾರೆ.

 

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next