Advertisement

ಈ ತೊಂದರೆ ಯಾರಿಂದ ಆಯ್ತು ಅಂತ ಚನ್ನಾಗಿ ಗೊತ್ತಿದೆ : ಸುದೀಪ್

02:25 PM Oct 14, 2021 | Team Udayavani |

ಕೋಟಿಗೊಬ್ಬ-3 ಚಿತ್ರದ ಮೊದಲ ಶೋ ರದ್ದಾಗಿದ್ದಕ್ಕೆ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ದಾರೆ. ಅಲ್ಲದೆ ವಿಡಿಯೋ ಒಂದನ್ನು ಬಿಡುಗಡೆ ಮಾಡಿರುವ ಕಿಚ್ಚಾ ಸುದೀಪ್, ಈ ತೊಂದರೆ ಯಾರಿಂದ ಆಯ್ತು ಎಂಬುದು ನನಗೆ ಗೊತ್ತಿದೆ. ಅವರಿಗೆ ಕಾಲವೇ ಉತ್ತರ ಕೊಡತ್ತೆ ಎಂದಿದ್ದಾರೆ.

Advertisement

ಸೂರಪ್ಪ ಬಾಬು ನಿಮ್ಮ ಜೊತೆ ನಾವಿದ್ದೇವೆ ಎಂದು ನಿರ್ಮಾಪಕರಿಗೆ ಧೈರ್ಯ ಹೇಳಿರುವ ಸುದೀಪ್, ನಾಳೆ 6 ಗಂಟೆಗೆ ಸಿನಿಮಾ ತೆರೆ ಕಾರಣಲಿದೆ ಎಂದು ಕಿಚ್ಚಾ ಹೇಳಿದ್ದಾರೆ.  ಇನ್ನು ಅಭಿಮಾನಿಗಳು ಕಾವುದೇ ಕಾರಣಕ್ಕೂ ಚಿತ್ರಮಂದಿರಗಳನ್ನು ಹಾನಿ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾರಣಾಂತರಗಳಿಂದ ಕೋಟಿಗೊಬ್ಬ-3 ಚಿತ್ರ ಬಿಡುಗಡೆ ವಿಳಂಬವಾಗುತ್ತಿದೆ. ಅದರೆ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಬೇಕು. ಚಿತ್ರ ಬಿಡುಗಡೆ ವಿಳಂಬಕ್ಕೂ ಚಿತ್ರಮಂದಿರಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ, ಥಿಯೇಟರ್ ಗಳ ಮುಂದೆ ಗಲಾಟೆ ಮಾಡದಂತೆ ಸುದೀಪ್ ಮನವಿ ಮಾಡಿದ್ದಾರೆ.

‘ಈಗಾಗಲೇ ಥಿಯೇಟರ್‌ಗಳ ಬಳಿ ಆಗಮಿಸಿರುವ ಎಲ್ಲ ಅಭಿಮಾನಿಗಳಿಗೂ ಶೋ ತಡವಾದ ಬಗ್ಗೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ಥಿಯೇಟರ್ ನಲ್ಲಿ ಸಿನಿಮಾ ಇದೆ.. ಆದರೆ ತಾಂತ್ರಿಕ ಸಮಸ್ಯೆಯಿಂದ ಸಿನಿಮಾ ತೋರಿಸಲು ಆಗುತ್ತಿಲ್ಲ. ಕೆಲವರ ಬೇಜವಾಬ್ದಾರಿಯಿಂದ ಈ ರೀತಿ ಆಗಿದೆ. ಸಿನಿಮಾ ಮತ್ತೆ ಯಾವಾಗ ಪ್ರದರ್ಶನ ಆಗುತ್ತೆ ಅನ್ನೋದನ್ನ ಮತ್ತೆ ನಾನು ನಿಮಗೆ ತಿಳಿಸ್ತಿನಿ. ಹೊಸ ಸಮಯ ತಿಳಿಸುವುದು ನನ್ನ ಕರ್ತವ್ಯ ಅಲ್ಲಿಯವೆಗೂ ನೀವೆಲ್ಲ ತಾಳ್ಮೆಯಿಂದ ಇರಿ, ಸಿನಿಮಾ ರಿಲೀಸ್ ಆಗಿಲ್ಲ ಅಂತ ಥಿಯೇಟರ್ ಗಳಿಗೆ ಹಾನಿ ಮಾಡಬೇಡಿ ಎಂದಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next