Advertisement

ಬಿಡುಗಡೆಯ ಮುನ್ನವೇ ‘ಕೋಟಿಗೊಬ್ಬ’ನಿಗೆ ಸಿನಿಮಾ ಚೋರರ ಬೆದರಿಕೆ  

08:50 PM Sep 29, 2021 | Team Udayavani |

ಬೆಂಗಳೂರು: ಕೋವಿಡ್ ಬಿಕ್ಕಟ್ಟಿನ ನಂತರ ಚೇತರಿಸಿಕೊಳ್ಳುತ್ತಿರುವ ಚಿತ್ರರಂಗಕ್ಕೆ ಇದೀಗ ಪೈರಸಿಯ ಭಯ ಕಾಡುತ್ತಿದೆ. ಈ ಹಿನ್ನೆಲೆ ಕೋಟಿಗೊಬ್ಬ 3 ಚಿತ್ರತಂಡ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

Advertisement

ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಅಕ್ಟೋಬರ್ 14ಕ್ಕೆ ಬಿಡುಗಡೆಯಾಗುತ್ತಿದೆ. ಬೆಳ್ಳಿ ಪರದೆ ಮೇಲೆ ಸಿನಿಮಾ ತರಲು ಚಿತ್ರತಂಡ ಶ್ರಮ ವಹಿಸುತ್ತಿದೆ. ಅಭಿಮಾನಿಗಳನ್ನು ರಂಜಿಸಲು ಚಿತ್ರಮಂದಿರಗಳಿಗೆ ಲಗ್ಗೆ ಇಡಲು ಸಜ್ಜಾಗಿರುವ ಕೋಟಿಗೊಬ್ಬನಿಗೆ ಇದೀಗ ಸಿನಿಮಾ ಚೋರರ ಭಯ ಶುರುವಾಗಿದೆ.

ಈ ಹಿಂದಿನಿಂದಲೂ ಬಿಡುಗಡೆಯಾದ ಮೊದಲ ದಿನವೇ ಬಹುತೇಕ ಸಿನಿಮಾಗಳು ಪೈರಸಿ ಆಗಿವೆ. ಆದರೆ, ಕೋಟಿಗೊಬ್ಬ 3 ಚತ್ರಕ್ಕೆ ಬಿಡುಗಡೆಯ ಮುನ್ನವೇ ಪೈರಸಿ ಕಾಟ ಶುರುವಾಗಿದೆ. ಚಿತ್ರದ ನಿರ್ಮಾಪಕ ಸೂರಪ್ಪಬಾಬುಗೆ ಟೆಲಿಗ್ರಾಂನಲ್ಲಿ ಬೆದರಿಕೆ ಸಂದೇಶಗಳು ಬರುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಸೈಬರ್ ಕ್ರೈಂ ಮೊರೆ ಹೋಗಿದ್ದಾರೆ.

ಬಹು ಕೋಟಿ ವೆಚ್ಚದಲ್ಲಿ ಅಭಿನಯ ಚಕ್ರವರ್ತಿ,  ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ನಿರ್ಮಾಣವಾಗಿದೆ. ಕೋಟಿಗೊಬ್ಬ-3 ಚಿತ್ರ ಅ.14 ರಂದು ತೆರೆಯ ಮೇಲೆ ಬರಲು ಸಿದ್ಧವಾಗಿದೆ. ಆದ್ರೆ, ಚಿತ್ರದ ನಿರ್ಮಾಪಕ ಸೂರಪ್ಪ ಬಾಬುಗೆ ಸಿನಿಮಾ ಬಿಡುಗಡೆ ಮಾಡಲು ಭಯ ಪಡುತ್ತಿದ್ದಾರೆ. ಕಿಡಿಗೇಡಿಗಳು ಸಿನಿಮಾ ಬಿಡುಗಡೆಯಾದ್ರೆ ಪೈರಸಿ ಮಾಡ್ತೀವಿ ಎಂದು ಬೆದರಿಕೆ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿರ್ಮಾಪಕರು ಮುನ್ನೆಚ್ಚರಿಕೆ ಕ್ರಮವಾಗಿ ಸೈಬರ್ ಕ್ರೈಂ ಮೊರೆ ಹೋಗಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಪತ್ರ ಬರೆದು ಅಳಲು ತೊಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next