Advertisement

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

10:43 PM Apr 28, 2024 | Team Udayavani |

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವಿನ ವಿಶ್ವಾಸದಲ್ಲಿರುವ ಡಾ| ಸುಧಾಕರ್‌ಗೆ ಬಿಜೆಪಿ ವರಿಷ್ಠರು ಈಗ ಮತ್ತೊಂದು ಜವಾಬ್ದಾರಿ ನೀಡಿದ್ದಾರೆ.

Advertisement

ಆಂಧ್ರಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷೆ ಹಾಗೂ ಮಾಜಿ ಮುಖ್ಯಮಂತ್ರಿ ಎನ್‌ಟಿಆರ್‌ ಪುತ್ರಿ ಪುರಂದೇಶ್ವರಿ ಸ್ಪರ್ಧೆ ಮಾಡುತ್ತಿರುವ ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಸುಧಾಕರ್‌ ನೇಮಕಗೊಂಡಿದ್ದಾರೆ.

ತೆಲುಗು ಭಾಷೆಯ ಮೇಲೆ ಹಿಡಿತ ಹಾಗೂ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ತಮ್ಮದೇ ಆದ ಪ್ರಭಾವ ಹೊಂದಿರುವ ಸುಧಾಕರ್‌ಗೆ ಈ ಹಿಂದೆಯೂ ಬಿಜೆಪಿ ವರಿಷ್ಠರು ಹೈದರಾಬಾದ್‌ ಮಹಾನಗರ ಪಾಲಿಕೆ ಹಾಗೂ ತೆಲಂಗಾಣ ವಿಧಾನಸಭಾ ಚುನಾವಣೆಗಳ ಜವಾಬ್ದಾರಿ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next