Advertisement

ಡಿ ಆರ್ ಡಿ ಒ ನಿರ್ದೇಶಕರ ಕಾರ್ಯಾಲಯಕ್ಕೆ ಸುಧಾಕರ್ ಭೇಟಿ-ಪರಿಶೀಲನೆ

12:31 PM May 14, 2021 | Team Udayavani |

 ಬೆಂಗಳೂರು : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಶುಕ್ರವಾರ ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿರುವ ಕೇಂದ್ರ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಆರ್ ಡಿಒ (ಇಸಿಎಸ್) ನಿರ್ದೇಶಕರ ಕಾರ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಕೋವಿಡ್ ಚಿಕಿತ್ಸೆಗೆ ಅಭಿವೃದ್ಧಿ ಪಡಿಸಿರುವ ಟು – ಡಿಜಿ ಔಷಧ, ಸಂಸ್ಥೆಯು ನಿರ್ಮಿಸಲು ಉದ್ದೇಶಿಸಿರುವ ಮೇಕ್ ಶಿಫ್ಟ್ ಹಾಸ್ಪಿಟಲ್ ಮತ್ತು ಆಕ್ಸಿಜನರೇಷನ್ ಪ್ಲಾಂಟ್ ಅಳವಡಿಕೆಗೆ ಸಂಬಂಧಿಸಿದಂತೆ ನಿರ್ದೇಶಕಿ ಶ್ರೀ ಮತಿ ಮಂಜುಳಾ, ಡಿಇಬಿಇಎಲ್ ನಿರ್ದೇಶಕ ಡಾ. ಯು.ಕೆ. ಸಿಂಗ್, ಎಲ್ ಆರ್ ಡಿಇ ನಿರ್ದೇಶಕ ಪಿ. ರಾಧಾಕೃಷ್ಣ, ಎಸ್ಟೇಟ್ ಮ್ಯಾನೇಜರ್ ಜೆ.ಡಿ.ಜಿ. ಪ್ರಸಾದ್ ರಾಜು ಅವರ ಜತೆ ಸಮಾಲೋಚನೆ ನಡೆಸಿದರು.

ಹೊಸದಿಲ್ಲಿಯ ಕೇಂದ್ರ ಕಚೇರಿಯಿಂದ ಐಎನ್ ಎಂಎಎಸ್ ನ ಡಾ. ಅನಂತ ಭಟ್, ಸಿಸಿ ಅಂಡ್ ಆರ್ ಅಂಡ್ ಡಿ ವಿಭಾಗದ ಡಾ. ರಾಧಾಕೃಷ್ಣ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದರು.

ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳಾದ ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರ, ನಿರ್ದೇಶಕ ಓಂಪ್ರಕಾಶ್ ಪಾಟೀಲ್, ಡ್ರಗ್ಸ್ ಕಂಟ್ರೋಲ್ ಇಲಾಖೆಯ ಅಮರೇಶ್ ತುಂಬಗಿ, ನಗರ ಜಿಲ್ಲೆಯ ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್ ಅವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next