Advertisement

ಚಿಂಚೋಳಿ ಭಾಗದ ರೈತರಿಗಾಗಿ ಶೀಘ್ರ ಸಕ್ಕರೆ ಕಾರ್ಖಾನೆ ಆರಂಭ: ಶಾಸಕ ಅವಿನಾಶ್ ಯಾದವ್

06:36 PM Feb 28, 2022 | Team Udayavani |

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ರೈತರಿಗಾಗಿ ಸಕ್ಕರೆ ಕಾರ್ಖಾನೆ ಇದೇ ಅಕ್ಟೋಬರ್ ತಿಂಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಶಾಸಕ ಡಾಕ್ಟರ್ ಅವಿನಾಶ್ ಯಾದವ್ ತಿಳಿಸಿದ್ದಾರೆ.

Advertisement

ತಾಲ್ಲೂಕಿನ ಕೊಳ್ಳೂರು ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಇನ್ನೂರು ರೈತರಿಗೆ 72 ಲಕ್ಷ ರೂ ಸಾಲದ ಚೆಕ್ ವಿತರಿಸಿ ಮಾತನಾಡಿದರು.

ಚಿಂಚೋಳಿ ಸಕ್ಕರೆ ಕಾರ್ಖಾನೆ ಕಳೆದ 2 ದಶಕಗಳಿಂದ ನಿಂತು ಹೋಗಿತ್ತು ನಮ್ಮ ಸರ್ಕಾರದಲ್ಲಿ ನೆನೆಗುದಿಗೆ ಬಿದ್ದ ಸಕ್ಕರೆಯನ್ನು ಪ್ರಾರಂಭಿಸಿ ಕಬ್ಬು ಬೆಳೆದ ರೈತರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು .

ಚಿಂಚೋಳಿ ಉಪ ಚುನಾವಣೆಯಲ್ಲಿ ತಾಲ್ಲೂಕಿನ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲಾಗಿದೆ ರೈತರಿಗೆ  ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ ಎಲ್ಲರೂ ಸಾಲದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next