Advertisement

ಸಕ್ಕರೆ ಕಾರ್ಖಾನೆ ಪುನಶ್ಚೇತನ ಕಷ್ಟ; ಆರ್ಥಿಕ ಇಲಾಖೆ

06:20 AM Aug 02, 2018 | Team Udayavani |

ಬೆಂಗಳೂರು: ಸಕ್ಕರೆ ಉದ್ಯಮ ಸಂಕಷ್ಟದಲ್ಲಿದ್ದು ಸಹಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಲು ಕಷ್ಟ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ಸಿಎಂ ಎಚ್‌.ಡಿ.ಕುಮಾರಸ್ವಾಮಿಗೆ ಹೇಳಿದ್ದಾರೆ. 

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಬೀದರ್‌, ಪಾಂಡವಪುರ ಹಾಗೂ ಚುಂಚನಕಟ್ಟೆ ಶ್ರೀರಾಮ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನ ಸಂಬಂಧ ಸಭೆಯಲ್ಲಿ, ಸಕ್ಕರೆ ಕಾರ್ಖಾನೆಗಳನ್ನು ಪುನಶ್ಚೇತನ ಗೊಳಿಸಬೇಕಾದರೆ ಕೋಟ್ಯಂತರ ರೂ. ಬೇಕಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಅದು ಸಾಧ್ಯವಾಗದು ಎಂದು ತಿಳಿಸಿದರು ಎಂದು ಮೂಲಗಳು ಹೇಳಿವೆ. 

ಎಚ್.ಡಿ.ಕುಮಾರಸ್ವಾಮಿ, ಪಾಂಡವಪುರ ಹಾಗೂ ಬೀದರ್‌ ಸಹಕಾ.ರಿ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ತಜ್ಞರಿಂದ ಕಾರ್ಯಸಾಧ್ಯತಾ ವರದಿ ಪಡೆದು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಸಚಿವರಾದ ಕೆ.ಜೆ.ಜಾರ್ಜ್‌, ಬಂಡೆಪ್ಪ ಕಾಶೆಂಪೂರ, ಸಾ.ರಾ.ಮಹೇಶ್‌, ಪುಟ್ಟರಾಜು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next