Advertisement
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆಗಳ ನೇತೃತ್ವದಲ್ಲಿ ಈ ಧರಣಿ ಆರಂಭವಾಗಿದೆ. ಸರ್ಕಾರದಿಂದ ಸ್ಪಷ್ಟ ಆದೇಶ ಹೊರ ಬೀಳುವವರೆಗೆ ಹಿಂದೆ ಸರಿಯಲ್ಲ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳಿಂದ ಬಂದಿದ್ದ ರೈತರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಭಜನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಸರ್ಕಾರ ರೈತರ ಬಗ್ಗೆ ತಳೆದಿರುವ ನಿರ್ಲಕ್ಷ್ಯ ಧೋರಣೆ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
Related Articles
ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿರುವ ರೈತ ಮಹಿಳೆ ಜಯಶ್ರೀ ಗುರನ್ನವರ ಮತ್ತೆ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಅನಾಮಧೇಯ ವ್ಯಕ್ತಿಯೊಬ್ಬರು ತಮಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪತ್ರ ಬರೆದಿದ್ದಾರೆಂದು ಕಣ್ಣೀರು ಹಾಕಿದ ಜಯಶ್ರೀ, ಪತ್ರವನ್ನು ಎಲ್ಲರ ಎದುರು ತೋರಿಸಿದರು. ಕಳೆದ ಹೋರಾಟದ ಸಮಯದಲ್ಲಿ ತಾವು ಮುಖ್ಯಮಂತ್ರಿಗೆ ನಿಂದಿಸಿದ್ದರ ಬಗ್ಗೆ ಟೀಕಿಸಿರುವ ಅನಾಮಧೇಯ ವ್ಯಕ್ತಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ನೋವು ಉಂಟು ಮಾಡಿದ್ದಾನೆಂದು ಕಣ್ಣೀರು ಹಾಕಿದರು.
Advertisement