Advertisement

ಧರ್ಮಸ್ಥಳದ ಸೇವಾ ಸಹಕಾರಿ ಬ್ಯಾಂಕಿನ ಸಿಇಒ ರವೀಂದ್ರನ್  ನೇಣಿಗೆ ಶರಣು

05:37 PM May 03, 2021 | Team Udayavani |

ಬೆಳ್ತಂಗಡಿ: ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಡಿ. (57) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಮೇ.3) ನಡೆದಿದೆ.

Advertisement

ಮಧ್ಯಾಹ್ನ ಸಂಘದ ಅಟಲ್ ಜಿ ಸಭಾಭವನದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ : ಆರ್.ಆರ್.ನಗರದ 200 ಸೋಂಕಿತರಿರುವ ಆಸ್ಪತ್ರೆಯಲ್ಲೂ ಆಕ್ಸಿಜನ್ ಸಮಸ್ಯೆ: ಡಿ.ಕೆ.ಸುರೇಶ್

ಇನ್ನು, ಮುಂಜಾನೆ 7.30 ರ ವೇಳೆ ಕಚೇರಿಗೆ ಬಂದು ತಮ್ಮ ಹಾಜರಿಯನ್ನು ನಮೂದಿಸಿದ್ದರು ಎನ್ನಲಾಗಿದೆ.

ಆತ್ಮ ಹತ್ಯೆಯ ಬಗ್ಗೆ ನಿಖರವಾದ ಕಾರಣ ಇದುವರೆಗೆ ತಿಳಿದುಬಂದಿಲ್ಲ, ವೈಯಕ್ತಿಕ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.  ಘಟನಾ ಸ್ಥಳಕ್ಕೆ ಭೇಟಿ ‌ನೀಡಿದ ಪೊಲೀಸರು, ಸ್ಥಳವನ್ನು ಪರೀಶೀಲಿಸಿ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ.

ಇದನ್ನೂ ಓದಿ : ಎಸ್ ಬಿ ಐ ಗ್ರಾಹಕರು ಈ ಕೆಲಸಕ್ಕಾಗಿ ಬ್ಯಾಂಕ್ ಗೆ ಹೋಗಬೇಕೆಂದಿಲ್ಲ..! ಮಾಹಿತಿ ಇಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next