Advertisement

Congress ಸರಕಾರದಲ್ಲಿ ದಲಿತ ಅಧಿಕಾರಿಗಳ ಆತ್ಮಹತ್ಯೆ: ಬಿ.ವೈ. ವಿಜಯೇಂದ್ರ

12:51 AM Aug 08, 2024 | Team Udayavani |

ಮಂಡ್ಯ: ಅಹಿಂದ ಹೆಸರು ಹೇಳಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರದಲ್ಲಿ ಹಗರಣಗಳ ಜತೆಗೆ ದಲಿತ ಅಧಿಕಾರಿಗಳ ಆತ್ಮಹತ್ಯೆ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

Advertisement

ಪಾದಯಾತ್ರೆ ಬುಧವಾರ ಮಂಡ್ಯಕ್ಕೆ ಆಗಮಿಸಿದಾಗ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿ, ವಾಲ್ಮೀಕಿ ನಿಗಮದ ಹಗರಣ, ಮೈಸೂರಿನ ಸಾವಿರಾರು ಕೋಟಿಯ ಮುಡಾ ನಿವೇಶನ ಹಗರಣ ನಡೆದಿದ್ದು, ಇಂಥ ಭ್ರಷ್ಟ, ದುಷ್ಟ ಕಾಂಗ್ರೆಸ್‌ ಸರಕಾರ ಹಾಗೂ ಭ್ರಷ್ಟ ಮುಖ್ಯಮಂತ್ರಿಗಳಿಂದ ನಾಡಿನ ಜನತೆಗೆ ನ್ಯಾಯ ಕೊಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಇಂಥ ಭ್ರಷ್ಟ ಮುಖ್ಯಮಂತ್ರಿಗಳಿಂದ ನಾಡಿನ ರೈತರ ಕಣ್ಣೀರು ಒರೆಸಲು ಸಾಧ್ಯವೇ?, ನಾಡಿನ ದೀನ ದಲಿತರಿಗೆ ನ್ಯಾಯ ದೊರಕಿಸಲು ಸಾಧ್ಯವೇ? ಖಂಡಿತ ಸಾಧ್ಯವಿಲ್ಲ. ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಹಗಲು ದರೋಡೆಯಲ್ಲಿ ನಿರತವಾಗಿದೆ. ವಾಲ್ಮೀಕಿ ನಿಗಮದ ದಲಿತ ಸಮುದಾಯದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕನಿಗೆ ಹಣ ಕೊಟ್ಟರೂ ವರ್ಗಾವಣೆ ಆಗದೆ ಯಾದಗಿರಿಯಲ್ಲಿ ದಲಿತ ಪೊಲೀಸ್‌ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂಥ ಭಂಡ ಸರಕಾರದಿಂದ ನಾಡಿನ ಜನತೆಗೆ ಒಳ್ಳೆಯದಾಗಲು ಸಾಧ್ಯವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next