Advertisement

ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಸೂಕ್ತ ಪೋಲಿಸ್ ಬಂದೋಬಸ್ತ್: SP ಮಿಥುನ್ ಕುಮಾರ್

09:57 PM Dec 20, 2020 | mahesh |

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ ಹಾಗೂ ಬಾಗೇಪಲ್ಲಿ ತಾಲೂಕಿನಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶಾಂತಿ ಹಾಗೂ ಕಾನೂನು ಸುವಸ್ಥೆ ಕಾಪಾಡಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಅವರು ಜಿಲ್ಲೆಯಲ್ಲಿ ನಡೆಯುತ್ತಿರುವ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಒಟ್ಟು 748 ಮತಗಟ್ಟೆಗಳಿದ್ದು ಅದರಲ್ಲಿ 74 ಸೂಕ್ಷ್ಮ, 74 ಅತಿಸೂಕ್ಷ್ಮ ಹಾಗೂ 562 ಸಾಮಾನ್ಯ ಮತಗಟ್ಟೆಗಳಿದ್ದು ಅದಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಚಿಂತಾಮಣಿ ತಾಲೂಕಿನಲ್ಲಿ 416,ಶಿಡ್ಲಘಟ್ಟ ತಾಲೂಕಿಗೆ 278 ಹಾಗೂ ಬಾಗೇಪಲ್ಲಿ ತಾಲೂಕಿಗೆ 314 ಪೋಲಿಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು(ಗೃಹರಕ್ಷಕ ಸಿಬ್ಬಂದಿ ಸಹಿತ) ನಿಯೋಜಿಸಲಾಗಿದೆ ಎಂದಿದ್ದಾರೆ.

ಚುನಾವಣೆಯ ಹಿನ್ನೆಲೆಯಲ್ಲಿ ನವೆಂಬರ್ 30 ರಿಂದ ಡಿಸೆಂಬರ್ 31ರ ಸಂಜೆ 5 ಗಂಟೆಯವರೆಗೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತರಕ ಘಟನೆಗಳು ಸಂಭವಿಸದಂತೆ ಅಗತ್ಯ ಕ್ರಮ ಕ್ರಮ ಕೈಗೊಳ್ಳುವ ಜೊತೆಗೆ ಮುಂಜಾಗೃತ ಕ್ರಮಕ್ಕಾಗಿ ಭದ್ರತಾ ಕಾಯ್ದೆಯಡಿಯಲ್ಲಿ ಒಟ್ಟು 702 ಪ್ರಕರಣಗಳನ್ನು ದಾಖಲಿಸಿ 653 ಜನ ಆಪಾದಿತರನ್ನು ಸ್ಥಳೀಯ ತಾಲೂಕು ದಂಡಾಧಿಕಾರಿಗಳ ಮುಂದೆ ಹಾಜರುಪಡಿಸಿ ಸದ್ವರ್ತನೆಯ ಬಗ್ಗೆ ಭದ್ರತಾ ಮುಚ್ಚಳಿಕೆಗಳನ್ನು ಪಡೆಯಲಾಗಿದೆ ಎಂದರು.

ಜಿಲ್ಲಾದ್ಯಂತ ಅಬಕಾರಿ ಕಾಯ್ದೆದಡೆಯಲ್ಲಿ 86 ಪ್ರಕರಣಗಳನ್ನು ದಾಖಲಿಸಿ 62 ಆರೋಪಿಗಳನ್ನು ಬಂಧಿಸಿ ಅವರಿಂದ 803 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದು ಡಿಸೆಂಬರ್ 22 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಎಲ್ಲರು ಸಹಕಾರ ನೀಡಬೇಕೆಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್‍ಕುಮಾರ್ ಮನವಿ ಮಾಡಿದ್ದಾರೆ.

ಬಾಗೇಪಲ್ಲಿ ತಾಲೂಕಿನಲ್ಲಿ 23 ಸೂಕ್ಷ್ಮ,35 ಅತಿ ಸೂಕ್ಷ್ಮ,173 ಸಾಮಾನ್ಯ ಸೇರಿದಂತೆ 231 ಮತಗಟ್ಟೆಗಳು, ಚಿಂತಾಮಣಿ ತಾಲೂಕಿನಲ್ಲಿ 31 ಸೂಕ್ಷ್ಮ,47 ಅತಿ ಸೂಕ್ಷ್ಮ,237 ಸಾಮಾನ್ಯ ಸೇರಿದಂತೆ 315 ಮತಗಟ್ಟೆ ಕೇಂದ್ರಗಳು ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 20 ಸೂಕ್ಷ್ಮ,30 ಅತಿ ಸೂಕ್ಷ್ಮ ಹಾಗೂ 152 ಸಾಮಾನ್ಯ ಮತಗಟ್ಟೆಗಳು ಸಹಿತ 202 ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮುವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next