Advertisement

ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ: ಸಿ.ಟಿ ರವಿ

04:10 PM Jun 06, 2023 | Team Udayavani |

ಚಿಕ್ಕಮಗಳೂರು: ಚಕ್ರವರ್ತಿ ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ. ಕಾಂಗ್ರೆಸ್ ಕಣ್ಣಿಗೆ ಸೂಲಿಬೆಲೆ ಲಾಡೆನ್ ರೀತಿ ಕಾಣುತ್ತಿದ್ದಾರಾ? ಲಾಡೆನ್ ಬಂದರೆ ಬಿಟ್ಟುಕೊಳ್ಳುತ್ತಾರೆ, ಚಕ್ರವರ್ತಿ ವಿಚಾರಗೋಷ್ಠಿ ರದ್ದು ಮಾಡುತ್ತಾರೆ, ಇವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವವರು ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಘೋಷಿತ‌ ತುರ್ತು ಪರಿಸ್ಥಿತಿಯೆಂದು ಕರೆಯುವುದಲ್ಲ. ಅಧಿಕಾರದ ಅತಿಯಾದ ಮದ ಎಂದು ಹೇಳಬಹುದು. ಅಧಿಕಾರದ ಅತಿಯಾದ ಮದ ಹೆಚ್ಚು‌ ದಿನ‌ ಇರಲು ಸಾಧ್ಯವಿಲ್ಲ ಎಂದರು.

ಹಿಂದೆ ಕಾಂಗ್ರೆಸ್, ಸಂವಿಧಾನವನ್ನೇ ಬುಡಮೇಲು ಮಾಡಿ ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿತ್ತು. ಜನ ಹಿಂದೆ ಕಾಂಗ್ರೆಸ್ಸಿಗೆ ಬುದ್ಧಿ ಕಲಿಸಿದ್ದನ್ನು ನೆನಪಿಟ್ಟುಕೊಳ್ಳಬೇಕು. ಮದ ಇಳಿಯುದಕ್ಕೆ-ಇಳಿಸಿಯುವುದಕ್ಕೆ ಬಹಳ ಕಾಲಬೇಕಾಗಲ್ಲ ಎಂದು ಸಿ.ಟಿ.ರವಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next