Advertisement

Sullia ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವು

01:03 AM Aug 15, 2023 | Team Udayavani |

ಸುಳ್ಯ: ಹೊಟ್ಟೆ ನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸುಳ್ಯ ಶಾಂತಿನಗರ ನಿವಾಸಿ ಸಂಜೀವ ಅವರ ಪುತ್ರ ಶ್ರೀಜಿತ್‌ (17) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

Advertisement

ಈತನಿಗೆ ಹೊಟ್ಟೆ ನೋವು ಕಾಣಿಸಿದ್ದು, ರವಿವಾರ ನೋವು ಉಲ್ಬಣಗೊಂಡು ಮನೆಯವರು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದರು. ಸೋಮವಾರ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಬಾಲಕನ ಸಾವಿಗೆ ಖಾಸಗಿ ಆಸ್ಪತ್ರೆಯ ವೈದ್ಯರು ಕಾರಣವೆಂದು ಆರೋಪಿಸಿ ಆಸ್ಪತ್ರೆ ಮುಂಭಾಗ ಸೋಮವಾರ ಸಂಜೆ ಬಾಲಕನ ಪೋಷಕರು ಮತ್ತು ಕುಟುಂಬಸ್ಥರು ಪ್ರತಿಭಟನೆಗೆ ಮುಂದಾದ ಘಟನೆಯೂ ನಡೆದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next