Advertisement

Sullia: ನದಿಯಲ್ಲಿ ಮುಳುಗಿ ಯುವಕ ಸಾವು

08:35 PM Dec 31, 2023 | Team Udayavani |

ಸುಳ್ಯ: ಸ್ನಾನಕ್ಕೆಂದು ನೀರಿಗಿಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯ ಸಮೀಪದ ಭಸ್ಮಡ್ಕ ಪಯಸ್ವಿನಿ ನದಿಯಲ್ಲಿ ರವಿವಾರ ಸಂಭವಿಸಿದೆ.

Advertisement

ಕಾಸರಗೋಡಿನ ವರ್ಕಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಮೀರ್‌ (27) ಮೃತರು. ಸಮೀರ್‌ ಸುಳ್ಯದಲ್ಲಿ ರೂಮ್‌ ಮಾಡಿಕೊಂಡು ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ರವಿವಾರ ರಜೆ ಹಿನ್ನೆಲೆಯಲ್ಲಿ ಮೂವರು ಯುವಕರು ಬೆಳಗ್ಗೆ ಬಟ್ಟೆ ಒಗೆಯಲು ಪಯಸ್ವಿನಿ ನದಿಗೆ ಇಳಿದಿದ್ದರು.

ಸಮೀರ್‌ ಬಟ್ಟೆ ತೊಳೆದು ಸ್ನಾನಕ್ಕೆ ಇಳಿದಿದ್ದು, ಉಳಿದ ಇಬ್ಬರು ಬಟ್ಟೆ ಒಗೆಯುತ್ತಿದ್ದರು ಎನ್ನಲಾಗಿದೆ. ಈ ವೇಳೆ ಸಮೀರ್‌ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸ್ಥಳೀಯ ಈಜುಗಾರರು ಹಾಗೂ ಅಗ್ನಿ ಶಾಮಕ ದಳದ ತಂಡ ಕಾರ್ಯಚರಣೆ ನಡೆಸಿ ಮೃತಹೇಹ ಮೇಲಕ್ಕೆತ್ತಿದರು. ಸುಳ್ಯ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next