Advertisement

ಅರೆಬಾಸೆ ವಿಚಾರ ಸಂಕಿರಣ, ಸಾಂಸ್ಕೃತಿಕ ಗೌಜಿ

08:50 AM Jan 06, 2019 | Team Udayavani |

ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ತಾಲೂಕು ಗೌಡರ ಯುವ ಸೇವಾ ಸಂಘ, ಜಾಲ್ಸೂರು ಗ್ರಾಮ ಗೌಡ ಸಮಿತಿ, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಇವುಗಳ ಆಶ್ರಯದಲ್ಲಿ ಅರೆಬಾಸೆ ವಿಚಾರ ಸಂಕಿರಣ, ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಗೌಜಿ ಕಾರ್ಯಕ್ರಮ ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸಭಾಭವನದಲ್ಲಿ ನಡೆಯಿತು.

Advertisement

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ ಅಧ್ಯಕ್ಷತೆ ವಹಿಸಿ ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಬೆಳವಣಿಗೆ ನಿಟ್ಟಿನಲ್ಲಿ ಅಕಾಡೆಮಿ ಹಮ್ಮಿಕೊಂಡಿರುವ ಕಾರ್ಯದ ವಿವರವನ್ನು ಮುಂದಿಟ್ಟರು.

ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ, ತಾ.ಪಂ. ಸದಸ್ಯ ತೀರ್ಥರಾಮ ಜಾಲ್ಸೂರು, ಜಾಲ್ಸೂರು ಗೌಡ ಗ್ರಾಮ ಸಮಿತಿ ಅಧ್ಯಕ್ಷ ಉಮಾನಾಥ ಗೌಡ ಹಾಗೂ ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಯಶ್ವಿ‌ತ್‌ ಕಾಳಂಮನೆ, ಕಾರ್ಯಕ್ರಮದ ಸಂಚಾಲಕಿ ಹಾಗೂ ಅಕಾಡೆಮಿ ಸದಸ್ಯ ರಾದ ತಿರುಮಲೇಶ್ವರಿ ಅಡ್ಕಾರು ಹಾಗೂ ಅಕಾಡೆಮಿಯ ಸದಸ್ಯರು ಉಪಸ್ಥಿತರಿದ್ದರು. ಅಕಾಡೆಮಿಯ ರಿಜಿಸ್ಟ್ರಾರ್‌ ಚಂದ್ರಹಾಸ ರೈ ಸ್ವಾಗತಿಸಿ ಪ್ರಸ್ತಾವನೆ ಗೈದರು. ಹೇಮಲತಾ ಗಣೇಶ್‌ ಕಜೆಗದ್ದೆ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next