Advertisement

Sullia; ಬಸ್‌ -ಆ್ಯಂಬುಲೆನ್ಸ್ ಮಧ್ಯೆ ಅಪಘಾತ

12:05 AM Aug 10, 2023 | Team Udayavani |

ಸುಳ್ಯ: ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಬಸ್‌ ಹಾಗೂ ಆ್ಯಂಬುಲೆನ್ಸ್ ಪರಸ್ಪರ ಢಿಕ್ಕಿಯಾಗಿ ಎರಡೂ ವಾಹನಗಳು ಜಖಂಗೊಂಡ ಘಟನೆ ಬುಧವಾರ ಸಂಜೆ ಸಂಭವಿಸಿದೆ.

Advertisement

ಕಾಸರಗೋಡು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಕೇರಳ ಸರಕಾರಿ ಬಸ್‌ ಹಾಗೂ ಮಡಿಕೇರಿಯಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್ ಮಧ್ಯೆ ಢಿಕ್ಕಿ ಸಂಭವಿಸಿದ್ದು, ಆ್ಯಂಬುಲೆನ್ಸ್ ನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ರೋಗಿಯನ್ನು ಬೇರೆ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next