Advertisement

Sullia ಅಪಹರಿಸುತ್ತಿದ್ದಾರೆ; ರಕ್ಷಿಸಿ ಎಂದು ಕರೆ: ನಾಕಾ ಬಂದಿ ಹಾಕಿ ಮರಳಿದ ಪೊಲೀಸರು!

12:28 AM Aug 19, 2024 | Team Udayavani |

ಸುಳ್ಯ: ಪುತ್ತೂರು ಸಮೀಪದ ಕಬಕದಿಂದ ಕಾರಿನಲ್ಲಿ ನನ್ನನ್ನು ಅಪಹರಣ ಮಾಡಿದ್ದು, ರಕ್ಷಣೆ ಮಾಡಿ ಎಂದು ಶನಿವಾರ ತಡ ರಾತ್ರಿ 112ಗೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿದ ಹಿನ್ನೆಲೆಯಲ್ಲಿ ಜಾಲ್ಸೂರು ಹಾಗೂ ಸುಳ್ಯದಲ್ಲಿ ಸುಳ್ಯ ಪೊಲೀಸರು ನಾಕಾ ಬಂದಿ ಹಾಕಿ ಕಾದು ಅಂತಹ ಯಾವುದೇ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಮರಳಿದ್ದಾರೆ.

Advertisement

ಕರೆ ಬಂದ ತತ್‌ಕ್ಷಣ 112 ನಿರ್ವಹಣೆ ಕೇಂದ್ರದಿಂದ ಪುತ್ತೂರು ನಗರ ಟೌನ್‌ ಪೊಲೀಸ್‌ ಠಾಣೆಗೆ ತಿಳಿಸಿದ್ದು, ಅವರು ಕೂಡಲೇ ವಯರ್ಲೆ ಮೂಲಕ ಸುಳ್ಯ ಹಾಗೂ ಇತರ ಠಾಣೆಗಳಿಗೆ ಮಾಹಿತಿ ರವಾನಿಸಿದರು. ಸುಳ್ಯ ಪೊಲೀಸರು ಸುಳ್ಯ ಹಾಗೂ ಜಾಲ್ಸೂರು ಬಳಿ ನಾಕಾ ಬಂದಿ ಹಾಕಿ ಬಹಳ ಸಮಯ ಕಾದು ಕುಳಿತರು. ಯಾವುದೇ ಶಂಕಿತ ವಾಹನ ಬಾರದಿದ್ದಾಗ ಪೊಲೀಸರು ಮರಳಿದ್ದಾರೆ; ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

 

Advertisement

Udayavani is now on Telegram. Click here to join our channel and stay updated with the latest news.

Next