Advertisement

ಸುಳ್ಯ, ಕಡಬಗಳಲ್ಲಿ ಉತ್ತಮ ಮಳೆ : ಕೃಷಿ ತೋಟಗಳು ಜಲಾವೃತ

02:00 AM Jun 18, 2022 | Team Udayavani |

ಮಂಗಳೂರು/ಸುಳ್ಯ/ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಮತ್ತೆ ಬಿರುಸು ಪಡೆಯುವ ನಿರೀಕ್ಷೆ ಇದ್ದು, ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಸುಳ್ಯ, ಕಡಬ, ಸುಬ್ರಹ್ಮಣ್ಯ ಮೊದಲಾದೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ. ರಾತ್ರಿಯೂ ಮಳೆ ಮುಂದುವರಿದಿದೆ.

Advertisement

ಸುಳ್ಯ ನಗರ,ಕನಕಮಜಲು, ಮಂಡೆಕೋಲು, ಅಜ್ಜಾವರ, ಆಲೆಟ್ಟಿ, ಕಲ್ಲುಗುಂಡಿ, ಸಂಪಾಜೆ, ಅರಂತೋಡು, ಗುತ್ತಿಗಾರು, ಸೋಣಂಗೇರಿ, ಐವರ್ನಾಡು, ಬೆಳ್ಳಾರೆ, ಕಲ್ಮಡ್ಕ, ಎಡಮಂಗಲ, ಪಂಜ, ಮುರುಳ್ಯ, ಬಳ್ಪ, ಸುಬ್ರಹ್ಮಣ್ಯ, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಬಿಳಿನೆಲೆ, ಕಡಬದ ಕಲ್ಲುಗುಡ್ಡೆ, ನೂಜಿಬಾಳ್ತಿಲ, ರೆಂಜಿಲಾಡಿ, ಇಚ್ಲಂಪಾಡಿ, ಕೊಣಾಜೆ ಭಾಗದಲ್ಲೂ ಭಾರೀ ಮಳೆಯಾಗಿದೆ.

ಸಂಜೆ ಸುರಿದ ಭಾರೀ ಮಳೆಗೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿ ಭಾಗದಲ್ಲಿ ತೋಡುಗಳಲ್ಲಿ ಪ್ರವಾಹ ಉಕ್ಕಿ ಹರಿದು ಗದ್ದೆ, ಅಡಿಕೆ ತೋಟಗಳಿಗೆ ನುಗ್ಗಿತು.

ಎಲ್ಲೋ ಅಲರ್ಟ್‌; ಮಳೆ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂ. 18ರಿಂದ 21ರ ವರೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಗುಡುಗು, ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಬೆಳಗ್ಗಿನ ಜಾವ ಉತ್ತಮ ಮಳೆಯಾಗಿತ್ತು. ಉಡುಪಿ, ಕುಂದಾಪುರ, ಹೆಬ್ರಿ, ಕಾರ್ಕಳ ಸಹಿತ ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಕ್ರವಾರ ಸಂಜೆಯ ಅನಂತರ ಜಿಟಿಜಿಟಿ
ಮಳೆಯಾಗಿದೆ.

Advertisement

ದಿನವಿಡೀ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇದ್ದು, ಕೆಲವೆಡೆ ಸಾಧಾರಣ ಮಳೆಯಾಗಿದೆ. ಹವಾಮಾನ ಇಲಾಖೆ ಮಾಹಿತಿಯಂತೆ ಶುಕ್ರವಾರದಂದು ಮಂಗಳೂರಿನಲ್ಲಿ 31.3 ಡಿ.ಸೆ. ಗರಿಷ್ಠ ಮತ್ತು 23.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next