Advertisement

Sullia: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ; ಆರೋಪಿ ವಶಕ್ಕೆ

07:29 PM Oct 16, 2024 | Team Udayavani |

ಸುಳ್ಯ: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂ ಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಕೊಡಿಯಾಲ ಗ್ರಾಮದ ಕಲಚರ್ಪೆ ಎನ್ನುವಲ್ಲಿ ಸ್ವಂತ ಅತ್ತಿಗೆ ಮೇಲೆ ಆರೋಪಿ ಶಂಕರ ನಾಯಕ್‌ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ಘಟನೆ ಕೆಲವು ದಿನಗಳ ಹಿಂದೆ ನಡೆದಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಕೊಲ್ಲುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಶಂಕರ ನಾಯಕ್‌ ವಿರುದ್ಧ ದೂರು ನೀಡಿದ್ದರು. ಘಟನೆಯಲ್ಲಿ ಆರೋಪಿಗೂ ಬೆಂಕಿ ತಗಲಿ ಗಾಯಗೊಂಡು ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಿಂದ ಡಿಸಾcರ್ಜ್‌ ಆದ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಾರೆ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಚಿರತೆ ಹೆಜ್ಜೆ ಗುರುತು ಪತ್ತೆ
ಸುಳ್ಯ, ಅ. 16: ಪಂಜದ ಕೂತ್ಕುಂಜ ಗ್ರಾಮದ ಕುದ್ವ ಎಂಬಲ್ಲಿನ ತೋಟದಲ್ಲಿ ಚಿರತೆ ಹೆಜ್ಜೆ ಗುರುತು ಕಂಡುಬಂದಿದೆ. ಘಟನ ಸ್ಥಳಕ್ಕೆ ಪಂಜ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಜ್ಜೆ ಗುರುತು ಗಾತ್ರ ದೊಡ್ಡದಾಗಿರುವುದರಿಂದ ಗಂಡು ಚಿರತೆಯದ್ದು ಎಂದು ಶಂಕಿಸಲಾಗಿದೆ. ಈ ಪ್ರದೇಶ ಬಂಟಮಲೆ ಅರಣ್ಯದ ಸಮೀಪದಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next