Advertisement

ಸುಳ್ಳುಗಾರರಲ್ಲಿ ಮೋದಿ ನಂ.1: ಪರಮೇಶ್ವರ

11:22 AM Mar 19, 2017 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಕೇವಲ ಸುಳ್ಳು ಹೇಳುವುದನ್ನೇ ಅಭ್ಯಾಸ ಮಾಡಿಕೊಂಡಿರುವ ಬಿಜೆಪಿಯಿಂದ ಯಾವುದೇ ಅಭಿವೃದ್ಧಿಯನ್ನು ದೇಶ ಕಾಣುವುದಿಲ್ಲ. ಸುಳ್ಳುಗಾರರಲ್ಲಿ ಪ್ರಧಾನಿ ನರೇಂದ್ರ ಮೋದಿ ನಂ-1 ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಂ-2 ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಟೀಕಿಸಿದ್ದಾರೆ.ಪಟ್ಟಣದಲ್ಲಿ ಉಪ ಚುನಾವಣೆ ಸಂಬಂಧ ಶನಿವಾರ ನಡೆದ ಕಾಂಗ್ರೆಸ್‌ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಶೇ.5 ಕೆಲಸ ಮಾಡಿ ಅದಕ್ಕೆ ಶೇ.50 ಪ್ರಚಾರ ಪಡೆಯುತ್ತದೆ ಎಂದರು.

Advertisement

ಬಿಜೆಪಿಯ 20 ಶಾಸಕರು ಕಾಂಗ್ರೆಸ್‌ಗೆ: ಬಿಜೆಪಿಗೆ ಭವಿಷ್ಯವಿಲ್ಲ. ಕೆಲವೇ ದಿನಗಳಲ್ಲಿ ಬಿಜೆಪಿಯ 20 ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ. ಅವರೆಲ್ಲ ಈಗಾಗಲೇ ನಮ್ಮ ಸಂಪರ್ಕದಲ್ಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್‌ ಹೊಸಬಾಂಬ್‌ ಸಿಡಿಸಿದ್ದಾರೆ. ಪಟ್ಟಣದ ಹೌಸಿಂಗ್‌ ಬೋರ್ಡ್‌ ಕಾಲನಿಯಲ್ಲಿ ಏರ್ಪಡಿಸಿದ್ದ ಪಕ್ಷದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next