Advertisement

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

01:54 AM Sep 13, 2024 | Team Udayavani |

ಅರಂತೋಡು: ಆಲೆಟ್ಟಿ ಗ್ರಾಮದ ವಿವಿಧ ಕಡೆಗಳಲ್ಲಿ ಹಲವು ದಿನಗಳಿಂದ ನಿರಂತರ ಆನೆ ದಾಳಿ ನಡೆಸುತ್ತಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶವಾಗಿದೆ. ಈ ಪ್ರದೇಶಕ್ಕೆ ಸುಳ್ಯ ವಲಯ ಅರಣ್ಯ ಅಧಿಕಾರಿ ಮಂಜುನಾಥ್‌ ಅವರು ಗುರುವಾರ ಭೇಟಿ ನೀಡಿದ್ದರು.

Advertisement

ಆಲೆಟ್ಟಿ ಗ್ರಾಮದ ತುದಿಯಡ್ಕ, ಪಡ್ಡು ಕಳಗಿ ಗುಡ್ಡೆಮನೆ, ಚಳ್ಳಂಗಾರು ಭಾಗದಲ್ಲಿ ಕೆಲವು ದಿನಗಳಿಂದ ಸುಮಾರು 6ರಿಂದ 8 ಆನೆಗಳು ರಾತ್ರಿ ಸಮಯದಲ್ಲಿ ಬಂದು ಬಾಳೆ ತೆಂಗು ಅಡಿಕೆ ಕೃಷಿ ಯನ್ನು ನಾಶಮಾಡಿವೆ. ಆನೆಗಳನ್ನು ಓಡಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ಮಾಡುತ್ತಿದ್ದು, ಆಗಿರುವ ಕೃಷಿ ನಾಶಕ್ಕೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ತಿಳಿಸಿದರು. ಶಾಶ್ವತ ಪರಿಹಾರ ಕಂಡುಕೊಳ್ಳಲು ಸೋಲಾರ್‌ಬೇಲಿ ಅಳವಡಿಸುವ ಚಿಂತನೆ ಇದೆ ಎಂದು ಅಧಿಕಾರಿ ವೆಂಕಟೇಶ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next