Advertisement

ಸುಳ್ಯ: ಬ್ಯಾಂಕ್‌ನಲ್ಲೇ ಪೆಟ್ರೋಲ್‌ ಸುರಿದು ಆತ್ಮಹತ್ಯೆಗೆ ಯತ್ನ

12:21 AM Feb 21, 2023 | Team Udayavani |

ಸುಳ್ಯ: ಇಲ್ಲಿನ ಕ್ರೆಡಿಟ್‌ ಸೌಹಾರ್ದ ಸಂಘದಿಂದ ಪಡೆದ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸಾಲ ಪಡೆದ ಗ್ರಾಹಕರೊಬ್ಬರು ಬ್ಯಾಂಕ್‌ಗೆ ಬಂದು ಪೆಟ್ರೋಲ್‌ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಬ್ಯಾಂಕ್‌ ಸಿಬಂದಿಗಳ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

Advertisement

ಸುಳ್ಯದ ಕ್ರೆಡಿಟ್‌ ಸೌಹಾರ್ದ ಸಂಘದಿಂದ ವ್ಯವಹಾರಕ್ಕೆ ಶಿವಣ್ಣ ಗೌಡ ಅವರು 2015ರಲ್ಲಿ 18.50 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಸಾಲ ಪಡೆದ ಬಳಿಕ ಸಮರ್ಪಕವಾಗಿ ಮರುಪಾವತಿ ನಡೆಸಿದ್ದರು. ಆದರೆ ಕೊರೊನಾ ಕಾಲದ ಬಳಿಕ ಶಿವಣ್ಣ ಗೌಡರು ಬ್ಯಾಂಕ್‌ಗೆ ಸಾಲದ ಕಂತು ಕಟ್ಟಿರಲಿಲ್ಲ. ತೆಗೆದ ಸಾಲ ಬೆಳೆಯುತ್ತಾ ಹೋಯಿತು. ಬ್ಯಾಂಕ್‌ನವರು ಶಿವಣ್ಣ ಗೌಡರಿಗೆ ಸಾಲ ಕಟ್ಟುವಂತೆ ತಿಳಿಸಿದ್ದರು. ಕೆಲವು ಬಾರಿ ಬ್ಯಾಂಕ್‌ಗೆ ಬಂದ್ದಿದ್ದ ಶಿವಣ್ಣ ಗೌಡರು ರಿಯಾಯಿತಿ ಮಾಡುವಂತೆ ಕೇಳಿಕೊಂಡ ಹಿನ್ನಲೆಯಲ್ಲಿ ಬ್ಯಾಂಕ್‌ನವರು ಬಡ್ಡಿ ರಿಯಾಯಿತಿಯೂ ನೀಡಿದ್ದರೆಂದೂ ತಿಳಿದುಬಂದಿದೆ. ಆದರೆ ಅಸಲು ಹಾಗೆ ಉಳಿದಿತ್ತು.

ಸೋಮವಾರ ಬೆಳಗ್ಗೆ ಬ್ಯಾಂಕ್‌ ಪ್ರಾರಂಭವಾಗುವ ಸಂದರ್ಭ ಶಿವಣ್ಣ ಗೌಡರು ಬಂದು ಕ್ಯಾನ್‌ನಲ್ಲಿ ತಂದಿದ್ದ ಪೆಟ್ರೋಲ್‌ ಅನ್ನು ಬ್ಯಾಂಕ್‌ನೊಳಗೆ ಚೆಲ್ಲಿ ನಾನು ಆತ್ಮಹತ್ಯೆ ಮಾಡುವುದಾಗಿ ಹೇಳಿದರೆನ್ನಲಾಗಿದೆ. ಇದನ್ನರಿತ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರು ಹಾಗೂ ಸಿಬಂದಿ ಶಿವಣ್ಣರನ್ನು ತಡೆದು ಬ್ಯಾಂಕ್‌ನಿಂದ ಹೊರಗೆ ಕರೆತಂದರು. ಬಳಿಕ ಪೊಲೀಸರು ಆಗಮಿಸಿ ಶಿವಣ್ಣ ಗೌಡರನ್ನು ಕರೆದುಕೊಂಡು ಹೋಗಿ ಸಮಾಧಾನಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next